ಕರ್ನಾಟಕ

karnataka

ETV Bharat / state

ರೋಹಿಣಿ ಬಳಿಕ ಮೈಸೂರಿನಲ್ಲಿ ಡಿಎಚ್​ಒ ಅಮರ್ ನಾಥ್ ಎತ್ತಂಗಡಿ! - ಡಿಎಚ್​ಒ ಅಮರ್ ನಾಥ್ ವರ್ಗಾವಣೆ ಸುದ್ದಿ,

ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವರ್ಗಾವಣೆ ಬಳಿಕ ಡಿಎಚ್​ಒ ಅಮರ್​ನಾಥ್​ರನ್ನು ಎತ್ತಂಗಡಿ ಮಾಡಲಾಗಿದೆ.

DHO Amarnath transfer, DHO Amarnath transfer from Mysore, DHO Amarnath transfer news, DHO Amarnath news, ಡಿಎಚ್​ಒ ಅಮರ್ ನಾಥ್ ವರ್ಗಾವಣೆ, ಮೈಸೂರಿನಿಂದ ಡಿಎಚ್​ಒ ಅಮರ್ ನಾಥ್ ವರ್ಗಾವಣೆ, ಡಿಎಚ್​ಒ ಅಮರ್ ನಾಥ್ ವರ್ಗಾವಣೆ ಸುದ್ದಿ, ಡಿಎಚ್​ಒ ಅಮರ್ ನಾಥ್ ಸುದ್ದಿ,
ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಟಿ. ಅಮರ್​ನಾಥ್

By

Published : Jun 18, 2021, 4:19 AM IST

ಮೈಸೂರು:ಮೈಸೂರಿನಲ್ಲಿ ಪರಸ್ಪರ ಬೀದಿ ಜಗಳಕ್ಕೆ ಇಳಿದಿದ್ದ ಐಎಎಸ್ ಅಧಿಕಾರಿಗಳ ಎತ್ತಂಗಡಿ ನಂತರ ಈಗ ಮತ್ತೊಬ್ಬ ಹಿರಿಯ ಅಧಿಕಾರಿಗೆ ವರ್ಗಾವಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ವಿಕೋಪ ಸ್ಥಿತಿಯನ್ನು ಸರಿಯಾಗಿ ನಿರ್ವಹಣೆ ಮಾಡಲಿಲ್ಲ ಎನ್ನುವ ಕಾರಣಕ್ಕೆ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಟಿ. ಅಮರ್​ನಾಥ್​ರನ್ನು ಸರಕಾರ ವರ್ಗಾವಣೆ ಮಾಡಿದೆ.

ಡಾ ಅಮರ್​ ನಾಥ್​ರ ಜಾಗಕ್ಕೆ ಆರೋಗ್ಯ ಇಲಾಖೆ ವಿಭಾಗಿಯ ಉಪನಿರ್ದೇಶಕ ಡಾ. ಕೆ.ಎಚ್. ಪ್ರಸಾದ್​ರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ಸಾವು ಅಧಿಕಗೊಳ್ಳಲು ಸೂಕ್ತ ನಿರ್ವಹಣೆ ಕೊರತೆ ಕಾರಣ ಎನ್ನಲಾಗಿತ್ತು.

ಡಾ. ಕೆ.ಎಚ್. ಪ್ರಸಾದ್​

ಕೋವಿಡ್​ ಪರಿಸ್ಥಿತಿ ನಿರ್ವಹಣೆ ವಿಚಾರವಾಗಿ ಆರೋಗ್ಯಾಧಿಕಾರಿ ಅಮರ್​ ನಾಥ್ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾನಾಗ್​ಗೆ ಕಾಲಕಾಲಕ್ಕೆ ಮಾಹಿತಿ ಕೊಟ್ಟು ಸಮನ್ವಯ ಮಾಡುವುದರಲ್ಲೂ ಅಮರ್​ ನಾಥ್ ವಿಫಲರಾಗಿದ್ದರು ಎನ್ನುವ ಮಾಹಿತಿ ಸರಕಾರಕ್ಕೆ ಹೋಗಿತ್ತು.

ಸದ್ಯ ನೇಮಕಗೊಂಡಿರುವ ಡಾ. ಪ್ರಸಾದ್ ಅವರು ಈ ಹಿಂದೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದ್ದ ಸುಳ್ವಾಡಿ ಪ್ರಸಾದ ತಿಂದು ಬಲಿಯಾದ ದುರಂತದಲ್ಲಿ ಸಕಾಲಿಕವಾಗಿ ಕಾರ್ಯನಿರ್ವಹಿಸಿದ್ದರು ಆ ಮೂಲಕ ನೂರಾರು ಜನರನ್ನು ಬದುಕುಳಿಯುವಂತೆ ಮಾಡಿದ್ದರು ಎಂದು ಮಾಹಿತಿ ಪಡೆದಿತ್ತು. ಹೀಗಾಗಿ ಕೋವಿಡ್ ನಂತ ವಿಕೋಪ ಸ್ಥಿತಿ ನಿರ್ವಹಣೆಗಾಗಿ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ ಎನ್ನಲಾಗಿದೆ.

ABOUT THE AUTHOR

...view details