ಮೈಸೂರು: ಕೋವಿಡ್ ಬಗ್ಗೆ ಸಾರ್ವಜನಿಕರು ಯಾವುದೇ ರೀತಿ ಭಯ ಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದ ಇದ್ದು ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಿ ಎಂದು ಕೋವಿಡ್ ಪರೀಕ್ಷೆ ವಿಭಾಗದ ಮುಖ್ಯಸ್ಥ ಡಾ. ಚಿದಂಬರಂ ಹೇಳಿದ್ದಾರೆ.
ಕೋವಿಡ್ ಭಯ ಬೇಡ, ಎಚ್ಚರ ವಹಿಸಿ, ಲಸಿಕೆ ಹಾಕಿಸಿಕೊಳ್ಳಿ: ಮೈಸೂರು ಕೋವಿಡ್ ಪರೀಕ್ಷೆ ವಿಭಾಗದ ಮುಖ್ಯಸ್ಥ - Dont fear for corona
ಮಾಧ್ಯಮಗಳ ವರದಿ ನೋಡಿ ಭಯ ಪಡುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಮರಣ ಪ್ರಮಾಣ ಕಡಿಮೆಯಿದೆ. ವಯಸ್ಸಾದವರು ಮತ್ತು ಕಾಯಿಲೆಯಿಂದ ಬಳಲುತ್ತಿರುವವರಿಗೆ ಈ ಕೋವಿಡ್ ಸೋಂಕು ಬೇಗ ಹರಡುತ್ತಿದೆ. ಕೋವಿಡ್ ಬಗ್ಗೆ ಸಾರ್ವಜನಿಕರು ಯಾವುದೇ ರೀತಿ ಭಯ ಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದ ಇದ್ದು, ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಿ ಎಂದು ಕೋವಿಡ್ ಪರೀಕ್ಷೆ ವಿಭಾಗದ ಮುಖ್ಯಸ್ಥ ಡಾ. ಚಿದಂಬರಂ ಹೇಳಿದ್ದಾರೆ.
![ಕೋವಿಡ್ ಭಯ ಬೇಡ, ಎಚ್ಚರ ವಹಿಸಿ, ಲಸಿಕೆ ಹಾಕಿಸಿಕೊಳ್ಳಿ: ಮೈಸೂರು ಕೋವಿಡ್ ಪರೀಕ್ಷೆ ವಿಭಾಗದ ಮುಖ್ಯಸ್ಥ ಕೋವಿಡ್ ಪರೀಕ್ಷೆ ವಿಭಾಗದ ಮುಖ್ಯಸ್ಥರಾದ ಡಾ.ಚಿದಂಬರಂ](https://etvbharatimages.akamaized.net/etvbharat/prod-images/768-512-11437859-thumbnail-3x2-sid.jpg)
ಇಂದು ಈಟಿವಿ ಭಾರತ್ ಜತೆ ಮಾತನಾಡಿದ ಮೈಸೂರು ಜಿಲ್ಲೆಯ ಕೋವಿಡ್ ಪರೀಕ್ಷೆ ವಿಭಾಗದ ಮುಖ್ಯಸ್ಥ ಡಾ. ಚಿದಂಬರಂ, ಕಳೆದ ವರ್ಷ ಕೊರೊನಾ ಬಂದವರನ್ನು ಬಿಟ್ಟು ಈಗ ಬೇರೆಯವರಲ್ಲಿ ಕೋವಿಡ್ ಕಾಣಿಸಿಕೊಳ್ಳುತ್ತಿದೆ. ರಾಜ್ಯದಲ್ಲಿ ಒಂದು ದಿನಕ್ಕೆ 1 ಕಾಲು ಲಕ್ಷ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಮೈಸೂರು ಜಿಲ್ಲೆಯಲ್ಲಿ 6ರಿಂದ 7 ಸಾವಿರ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗುತ್ತಿದೆ ಎಂದರು.
ಮಾಧ್ಯಮಗಳ ವರದಿ ನೋಡಿ ಭಯ ಪಡುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಮರಣ ಪ್ರಮಾಣ ಕಡಿಮೆಯಿದೆ. ವಯಸ್ಸಾದವರು ಮತ್ತು ಕಾಯಿಲೆಯಿಂದ ಬಳಲುತ್ತಿರುವವರಿಗೆ ಈ ಕೋವಿಡ್ ಸೋಂಕು ಬೇಗ ಹರಡುತ್ತಿದೆ. ಕೋವಿಡ್ ನಿಯಮವನ್ನು ಪಾಲಿಸಿ 46 ವರ್ಷ ಮೇಲ್ಪಟ್ಟ ಎಲ್ಲರು ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಿ. ಇದರಿಂದ ಸಾವಿನ ಪ್ರಮಾಣವನ್ನು ಕಡಿಮೆ ಮಾಡಬಹುದು ಎಂದು ಡಾ. ಚಿದಂಬರಂ ವಿವರಿಸಿದರು.