ಕರ್ನಾಟಕ

karnataka

By

Published : Oct 26, 2019, 2:19 PM IST

ETV Bharat / state

ಆನೆ ದಂತ ಮಾರಾಟಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ, ಒಬ್ಬ ಎಸ್ಕೇಪ್​

ಆನೆ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರ ದಳದ ಅಧಿಕಾರಿಗಳು ಪಿರಿಯಾಪಟ್ಟಣ ತಾಲೂಕಿನ ಆನೆಚೌಕೂರು ಬಳಿ ಬಂಧಿಸಿ, ದಂತ ವಶಪಡಿಸಿಕೊಂಡಿದ್ದಾರೆ.

ಆನೆ ದಂತ ಮಾರಾಟಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ!

ಮೈಸೂರು: ಆನೆ ದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರ ದಳದ ಅಧಿಕಾರಿಗಳು ಪಿರಿಯಾಪಟ್ಟಣ ತಾಲೂಕಿನ ಆನೆಚೌಕೂರು ಬಳಿ ಬಂಧಿಸಿ, ದಂತ ವಶಪಡಿಸಿಕೊಂಡಿದ್ದಾರೆ.

ಆನೆ ದಂತ ಮಾರಾಟಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಆನೆ ದಂತವನ್ನು ಕದ್ದು, ಅದನ್ನು ಮಾರಾಲು ಯತ್ನಿಸಿದ ಸುರೇಶ್ ಹಾಗೂ ಚೇತನ್ ಎಂಬುವವರನ್ನು ಪಿರಿಯಾಪಟ್ಟಣ ತಾಲೂಕಿನ ಆನೆಚೌಕೂರು ಬಳಿ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರ ದಳದ ಸಿಬ್ಬಂದಿ ಬಂಧಿಸಿದ್ದು , ಬಂಧಿತರಿಂದ 20 ಕೆಜಿ ತೂಕದ ಒಂದು ಆನೆ ದಂತ ವಶಪಡಿಸಿಕೊಂಡಿದ್ದಾರೆ. ಬಂಧಿತರು ಬಳಸುತ್ತಿದ್ದ ಕಾರ​ನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಈ ಕೃತ್ಯದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಸಂಚಾರ ದಳದ ಪೊಲೀಸರು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ABOUT THE AUTHOR

...view details