ಕರ್ನಾಟಕ

karnataka

ಮೈಸೂರು: ಸಿಎಂ ಭೇಟಿ ಮಾಡಿ ರೈತ ವಿರೋಧಿ ಕಾಯ್ದೆ ಜಾರಿಗೆ ತರದಂತೆ ರೈತ ಮುಖಂಡರ ಮನವಿ

By ETV Bharat Karnataka Team

Published : Nov 18, 2023, 5:10 PM IST

Updated : Nov 18, 2023, 11:01 PM IST

ರೈತ ಮುಖಂಡರು ಸಿಎಂ ಭೇಟಿ ಮಾಡಿ ರೈತ ವಿರೋಧಿ ಕಾಯ್ದೆಗಳನ್ನು ರಾಜ್ಯದಲ್ಲಿ ಜಾರಿಗೆ ತರದಂತೆ ಮನವಿ ಮಾಡಿದರು.

ರೈತ ವಿರೋಧಿ ಕಾಯ್ದೆ ಜಾರಿಗೆ ತರದಂತೆ ರೈತ ಮುಖಂಡರು ಮನವಿ
ರೈತ ವಿರೋಧಿ ಕಾಯ್ದೆ ಜಾರಿಗೆ ತರದಂತೆ ರೈತ ಮುಖಂಡರು ಮನವಿ

ಕುರುಬೂರು ಶಾಂತಕುಮಾರ್

ಮೈಸೂರು: ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ರಾಜ್ಯದಲ್ಲಿ ಜಾರಿ ತರಬಾರದು ಎಂದು ರೈತ ಮುಖಂಡರು ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಕುರುಬೂರು ಶಾಂತಕುಮಾರ್ ಮಾತನಾಡಿದರು.

ಇಂದು ಮೈಸೂರಿನ ಟಿ ಕೆ.ಲೇಔಟ್​ನಲ್ಲಿರುವ ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿದ ರೈತ ಮುಖಂಡರು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ರೈತ ಮುಖಂಡ ಕುರಬೂರು ಶಾಂತಕುಮಾರ್, ಇಂದು ಸಿಎಂ ಅವರನ್ನು ಭೇಟಿಯಾಗಿ, ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಅದರಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ರಾಜ್ಯದಲ್ಲಿ ಜಾರಿಗೆ ತರಬಾರದು.

ಕಾಯ್ದೆ ರದ್ದುಗೊಳಿಸಬೇಕು ಎಂಬ ಪ್ರಮುಖ ಅಂಶಗಳ ಜೊತೆಗೆ, ಕಬ್ಬಿಗೆ ಪ್ರತಿ ಟನ್​ಗೆ ಹೆಚ್ಚಿಗೆ ಹಣ ನೀಡಬೇಕು. ಅದರ ಜೊತೆಗೆ ಪ್ರತಿ ಟನ್​ಗೆ ನೀಡುವ ಹಣದ ಜೊತೆಗೆ ಕಟಾವು ಸಾಗಣೆ ವೆಚ್ಚವನ್ನು ಸೇರಿಸಬಾರದು ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತ ಮುಖಂಡರಾದ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಜೊತೆಗೆ ಮಧ್ಯ ರಾತ್ರಿ ಪೊಲೀಸರು ರೈತ ಮುಖಂಡರನ್ನು ಬಂಧಿಸುತ್ತಿರುವುದು ಸರಿಯಲ್ಲ. ಇದು ಸರ್ಕಾರಕ್ಕೆ ಶೋಭೆ ತರುವುದಿಲ್ಲ. ರೈತರೇನು ಗೂಂಡಾಗಳು ಹಾಗೂ ಸಮಾಜಘಾತುಕರಲ್ಲ. ಸಮಾಜದ ಹಿತ ಚಿಂತಕರಾದ ರೈತ ಮುಖಂಡರನ್ನ ಯಾವುದೇ ಕಾರಣಕ್ಕೂ ಸಕಾರಣವಿಲ್ಲದೇ ಬಂಧಿಸಬಾರದು. ಮುಂದೆ ಈ ರೀತಿ ಘಟನೆಗಳು ಆಗದಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ರೈತ ಮುಖಂಡರು ಮನವಿ ಸಲ್ಲಿಸಿರುವುದಾಗಿ ಕುರುಬೂರು ಶಾಂತಕುಮಾರ್ ಮಾಧ್ಯಮಗಳಿಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿರುವ ಬಗ್ಗೆ ಮಾಹಿತಿ ನೀಡಿದರು.

ಇದೇ ತಿಂಗಳು 9ರಂದು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ನೂರಾರು ರೈತರು ಮೈಸೂರಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯ ಎದುರು ಧರಣಿ ನಡೆಸಲು ಮುಂದಾಗಿದ್ದರು. ಈ ವೇಳೆ ರೈತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದು ಹಲವು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ:ಮೈಸೂರು ಲೋಕಸಭಾ ಕ್ಷೇತ್ರದಿಂದ ನಾನೂ ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿ: ಅರಸು ಮೊಮ್ಮಗ ಸೂರಜ್ ಹೆಗ್ಡೆ

Last Updated : Nov 18, 2023, 11:01 PM IST

ABOUT THE AUTHOR

...view details