ಕರ್ನಾಟಕ

karnataka

ETV Bharat / state

ತಮಿಳುನಾಡಿಗೆ ನೀರು ಬಿಡುಗಡೆ ಖಂಡಿಸಿ ರಸ್ತೆ ತಡೆದು ರೈತರಿಂದ ಪ್ರತಿಭಟನೆ - undefined

ಮೈಸೂರಲ್ಲಿ ಕಬಿನಿ ಹಾಗೂ ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ರಾಜ್ಯದ ಕಬ್ಬು ಬೆಳೆಗಾರರ ಸಂಘವು ರಾಷ್ಟ್ರೀಯ ಹೆದ್ದಾರಿಯನ್ನು 1 ಗಂಟೆಗೂ ಹೆಚ್ಚು ಕಾಲ ತಡೆದು ಪ್ರತಿಭಟನೆ ನಡೆಸಿತು.

ಪ್ರತಿಭಟನೆ

By

Published : Jul 25, 2019, 3:43 AM IST

ಮೈಸೂರು:ಕಬಿನಿ ಹಾಗೂ ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ರಾಜ್ಯದ ಕಬ್ಬು ಬೆಳೆಗಾರರ ಸಂಘವು ರಾಷ್ಟ್ರೀಯ ಹೆದ್ದಾರಿಯನ್ನು 1 ಗಂಟೆಗೂ ಹೆಚ್ಚು ಕಾಲ ತಡೆದು ಪ್ರತಿಭಟನೆ ನಡೆಸಿದೆ.

ಕಬಿನಿ ಹಾಗೂ ಕೆ.ಆರ್.ಎಸ್ ಜಲಾಶಯಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗದಿದ್ದರು ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ಖಂಡಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ, ವರ್ತಕರ ಸಂಘ ಹಾಗೂ ರೈತ ಪರ ಸಂಘಟನೆಯವರು ಟಿ.ನರಸೀಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 212 ರಲ್ಲಿ 1 ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ನಮ್ಮ ಜಲಾಶಯಗಳು ತುಂಬಿ ನಮ್ಮ ರೈತರಿಗೆ ಬೇಸಾಯಕ್ಕೆ ಕಾಲುವೆಗಳಿಗೆ ನೀರು ಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದರು.

ತಮಿಳುನಾಡಿಗೆ ನೀರು ಬಿಡುಗಡೆ ಖಂಡಿಸಿ ಪ್ರತಿಭಟನೆ

ಹೆದ್ದಾರಿ ರಸ್ತೆ ತಡೆಯಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು, ಕಿಲೋಮೀಟರ್​​ಗಟ್ಟಲೇ ವಾಹನಗಳು ರಸ್ತೆಯಲ್ಲೇ ನಿಂತಿದ್ದವು.

For All Latest Updates

TAGGED:

ABOUT THE AUTHOR

...view details