ಮೈಸೂರು: ದೆಹಲಿಯ ಜೆಎನ್ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಮೈಸೂರು ವಿವಿಯಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ 'ಫ್ರೀ ಕಾಶ್ಮೀರ್' ಪೋಸ್ಟರ್ ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಳಿನಿ ಬಾಲಕುಮಾರ್ ಇಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದರು.
'ಫ್ರೀ ಕಾಶ್ಮೀರ್' ಪೋಸ್ಟರ್ ಪ್ರದರ್ಶಿಸಿದ ಪ್ರಕರಣ: ವಿಚಾರಣೆಗೆ ಹಾಜರಾಗಿ ಪ್ರಶ್ನೆಗಳಿಗೆ ಉತ್ತರಿಸಿದ ವಿದ್ಯಾರ್ಥಿನಿ - ಮೈಸೂರು ವಿವಿ ಫ್ರೀ ಕಾಶ್ಮೀರ್ ಪೋಸ್ಟರ್ ಪ್ರಕರಣ
ದೆಹಲಿಯ ಜೆಎನ್ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಮೈಸೂರು ವಿವಿ ಆವರಣದಲ್ಲಿ ಜನವರಿ 8 ರಂದು ದೊಡ್ಡ ಮಟ್ಟದ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿನಿ ನಳಿನಿ ಬಾಲಕುಮಾರ್ 'ಫ್ರೀ ಕಾಶ್ಮೀರ್' ಎಂಬ ಫಲಕವನ್ನು ಹಿಡಿದಿದ್ದು, ಇವರ ವಿರುದ್ಧ ಪ್ರಕರಣ ದಾಖಲಾಗಿತ್ತು.
!['ಫ್ರೀ ಕಾಶ್ಮೀರ್' ಪೋಸ್ಟರ್ ಪ್ರದರ್ಶಿಸಿದ ಪ್ರಕರಣ: ವಿಚಾರಣೆಗೆ ಹಾಜರಾಗಿ ಪ್ರಶ್ನೆಗಳಿಗೆ ಉತ್ತರಿಸಿದ ವಿದ್ಯಾರ್ಥಿನಿ mysore vv student nalini](https://etvbharatimages.akamaized.net/etvbharat/prod-images/768-512-5677341-thumbnail-3x2-kumgg.jpg)
ದೆಹಲಿಯ ಜೆಎನ್ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಖಂಡಿಸಿ ಮೈಸೂರು ವಿವಿ ಆವರಣದಲ್ಲಿ ಜ.8 ರಂದು ದೊಡ್ಡ ಮಟ್ಟದ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿನಿ ನಳಿನಿ ಬಾಲಕುಮಾರ್ 'ಫ್ರೀ ಕಾಶ್ಮೀರ್' ಎಂಬ ಫಲಕವನ್ನು ಹಿಡಿದಿದ್ದು ದೊಡ್ಡ ಮಟ್ಟದ ಸುದ್ದಿಯಾಗಿತ್ತು. ಇವರ ವಿರುದ್ಧ ಜ. 9ರಂದು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೇಶದ್ರೋಹದ ಕೇಸ್ ದಾಖಲಾಗಿತ್ತು. ಈ ಸಂಬಂಧ ವಿಚಾರಣೆಗೆ ಹಾಜರಾದ ನಳಿನಿ ಬೆಳಗ್ಗೆ 11 ಗಂಟೆಯಿಂದ ಸಂಜೆವರೆಗೆ ಪೊಲೀಸ್ ಅಧಿಕಾರಿಗಳು ಕೇಳಿದ 150ಕ್ಕೂ ಹೆಚ್ಚು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ವಿಚಾರಣೆ ಮುಗಿಸಿ ಠಾಣೆಯಿಂದ ಹೊರ ಬಂದು ಮಾಧ್ಯಮಗಳ ಜೊತೆ ಮಾತನಾಡಿದ ನಳಿನಿ, ಈಗಾಗಲೇ ಈ ಪ್ರಕರಣದ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದೇನೆ. ಅದೇ ವಿಚಾರವನ್ನು ಪೊಲೀಸರಿಗೂ ವಿವರಿಸಿದ್ದೇನೆ. ಅದನ್ನು ಬಿಟ್ಟರೆ ಬೇರೆ ಏನನ್ನು ಹೇಳಲು ಇಚ್ಚಿಸುವುದಿಲ್ಲ ಎಂದರು.