ಕರ್ನಾಟಕ

karnataka

ETV Bharat / state

ಕೊರೊನಾ ಸಂಕಷ್ಟದ ಕಾಲದಲ್ಲಿಯೂ ರೈತರಿಗೆ ಸರ್ಕಾರದಿಂದ ವಂಚನೆ.. ಕುರುಬೂರು ಶಾಂತಕುಮಾರ್ ಕಿಡಿ

ಸರ್ಕಾರ ರೈತ ವಿರೋಧಿ ಕಾಯ್ದೆ, ಯೋಜನೆಗಳನ್ನು ತಂದು ಅನ್ಯಾಯ ಮಾಡುತ್ತಿದೆ. ಕೂಡಲೇ ರಾಜ್ಯ ಸರ್ಕಾರ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು.

By

Published : Jun 1, 2020, 10:55 PM IST

Kurubur Shantakumar
ಕುರುಬೂರು ಶಾಂತಕುಮಾರ್

ಮೈಸೂರು :ಕೊರೊನಾದಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರೈತರ ಹಿತ ಕಾಯಬೇಕಾದ ವಂಚನೆ ಮಾಡುತ್ತಿದೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆರೋಪಿಸಿದ್ದಾರೆ.

ಕುವೆಂಪು ಉದ್ಯಾನವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರೀಕೃತ ಬ್ಯಾಂಕ್​ಗಳ ಸಾಲ ಮರುಪಾವತಿ ಮಾಡಿದವರಿಗೆ ಮಾತ್ರ ಹೊಸ ಸಾಲ ಎನ್ನುತ್ತಿದ್ದಾರೆ. ಆದರೆ, ಈ ಸಂದರ್ಭದಲ್ಲಿ ರೈತರು ಸಾಲಮರುಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ. ಇದು ರೈತರಿಗೆ ನುಂಗಲಾರದ ತುತ್ತಾಗಿದೆ. ಬೆಳೆಗಳಿಗೆ ಸರಿಯಾದ ಬೆಲೆ ಸಿಗದೆ ರಸ್ತೆಗೆ ಸುರಿಯುವ ಸ್ಥಿತಿ ಎದುರಾಗಿದೆ ಎಂದು ಕಿಡಿಕಾರಿದರು.

ಸರ್ಕಾರದ ವಿರುದ್ಧ ಕುರುಬೂರು ಶಾಂತಕುಮಾರ್ ತೀವ್ರ ವಾಗ್ದಾಳಿ
ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ಹಿತಕಾಯುತ್ತಿಲ್ಲ. ರೈತ ವಿರೋಧಿ ಕಾಯ್ದೆ, ಯೋಜನೆಗಳನ್ನು ತಂದು ಅನ್ಯಾಯ ಮಾಡುತ್ತಿದೆ. ಕೂಡಲೇ ರಾಜ್ಯ ಸರ್ಕಾರ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಕೃಷಿಗಾಗಿ ರೈತರು ಫೈನಾನ್ಸ್ ಸಂಸ್ಥೆಗಳಲ್ಲಿ ಕೈಸಾಲ ಮಾಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಸಾಲ ಮರುಪಾವತಿಸಲಾಗದೆ ಕಂಗೆಟ್ಟಿದ್ದಾರೆ ಎಂದರು. ಆದರೆ, ಫೈನಾನ್ಸ್ ಸಂಸ್ಥೆಗಳು ರೈತರ ಮೇಲೆ ದಬ್ಬಾಳಿಕೆ ಮಾಡುತ್ತಿವೆ.
ಈ ಬಗ್ಗೆ ಜಿಲ್ಲಾಡಳಿತ ಹಾಗೂ ಸರ್ಕಾರ ಗಮನಹರಿಸಬೇಕು. ರೈತರಿಗೆ ಹೊಸ ಸಾಲ ನೀಡಿ ಕೃಷಿಗೆ ಮತ್ತಷ್ಟು ಪ್ರೋತ್ಸಾಹ ನೀಡಬೇಕು. ರೈತರಿಗೆ ಉಚಿತ ವಿದ್ಯುತ್ ನೀಡುವ ಬಗ್ಗೆ ಕ್ರಮವಹಿಸಬೇಕು. ಗ್ರಾಮೀಣ ಭಾಗದ ಜನರಿಗೆ ವಿದ್ಯುತ್ ಬಿಲ್‌ನಲ್ಲಿ ರಿಯಾಯಿತಿ ನೀಡಬೇಕು. ರೈತರ ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details