ಮೈಸೂರು :ನಂಜನಗೂಡು ತಾಲೂಕಿನ ಹುಚ್ಚಗಣಿ ಗ್ರಾಮದ ಮಹದೇವಮ್ಮ ದೇವಸ್ಥಾನ ನೆಲಸಮಗೊಳಿಸಿದ ವಿಚಾರವಾಗಿ ತಹಶೀಲ್ದಾರ್ ಮೋಹನ್ ಕುಮಾರಿ ಅವರನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿದೆ.
ತಹಶೀಲ್ದಾರ್ ಮೋಹನ ಕುಮಾರಿ ಅವರನ್ನು ಐಎಂಎ ತನಿಖಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದ್ದು, ನಂಜನಗೂಡು ತಹಶೀಲ್ದಾರ್ ಹುದ್ದೆಗೆ ಸೂಕ್ತ ಪ್ರಭಾರ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ.
ಏನಿದು ಘಟನೆ?:ನಂಜನಗೂಡು ತಾಲೂಕಿನ ಹುಚ್ಚಗಣಿ ಗ್ರಾಮದ ಮಹದೇವಮ್ಮ ದೇವಾಲಯವನ್ನು ಸೆ.10ರ ಮುಂಜಾನೆ ತೆರವು ಮಾಡಲಾಗಿತ್ತು. ಈ ಘಟನೆ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕ ರಾಜಕೀಯ ಮುಖಂಡರು ಇದಕ್ಕೆ ಅಸಮಾಧಾನ ಹೊರ ಹಾಕಿದ್ದರು.