ಕರ್ನಾಟಕ

karnataka

ETV Bharat / state

ಫೋನ್ ಕದ್ದಾಲಿಕೆ ಬಗ್ಗೆ ಮೊದಲು ಧ್ವನಿ ಎತ್ತಿದ್ದೇ ನಾನು: ಹೆಚ್. ವಿಶ್ವನಾಥ್ - Former CM Siddaramaih

ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿದ್ದಾರೆ. ನಾನು ಮೊದಲೇ ಈ ವಿಚಾರವನ್ನು ಪ್ರಸ್ತಾಪಿಸಿದ್ದೆ. ಈಗ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿದ್ದು, I am very happy ಎಂದಿದ್ದಾರೆ.

ಪೋನ್ ಕದ್ದಾಲಿಕೆ ಪ್ರಕರಣ ಸಿಬಿಐ ತನಿಖೆಗೆ ವಹಿಸಿದ ಸರ್ಕಾರದ ನಿರ್ಧಾರ ಸ್ವಾಗತಾರ್ಹ: ಎಚ್.ವಿಶ್ವನಾಥ್

By

Published : Aug 18, 2019, 8:36 PM IST

ಮೈಸೂರು: ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಅನರ್ಹ ಶಾಸಕ ಹೆಚ್. ವಿಶ್ವನಾಥ್ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಸಿಬಿಐ ಒಂದು ಸಾಂವಿಧಾನಿಕ ಸಂಸ್ಥೆ. ಅಂತಹ ಸಂಸ್ಥೆ, ಇಂತಹ ಗಂಭೀರ ಪ್ರಕರಣ ತನಿಖೆ ಮಾಡುತ್ತಿರುವುದು ಸ್ವಾಗತಾರ್ಹ. ಬೇಹುಗಾರಿಕ ಸಂಸ್ಥೆ ಮುಖ್ಯಮಂತ್ರಿಗಳ ಬಳಿ ಇರುತ್ತೆ. ಅವರ ಅಣತಿಯಂತೆ ಈ ಕೆಲಸ ನಡೆದಿದೆ. ತನಿಖೆಯಿಂದ ಎಲ್ಲಾ ಸತ್ಯಗಳು ಹೊರಬರಲಿವೆ. ಕುಂಬಳಕಾಯಿ ಕಳ್ಳ ಅಂದ್ರೆ ಯಾರಾದ್ರಾ ಬೆನ್ನು ಮುಟ್ಟಿ ನೋಡಿಕೊಳ್ತಾರಾ ಎಂದು ಪ್ರಶ್ನಿಸಿದರು.

ಅನರ್ಹ ಶಾಸಕ ಹೆಚ್. ವಿಶ್ವನಾಥ್

ಇನ್ನು ಸಿದ್ದರಾಮಯ್ಯ ಸೇರಿದಂತೆ ಸಾಕಷ್ಟು ಕಾಂಗ್ರೆಸ್‌ ನಾಯಕರು ಸಿಬಿಐ ತನಿಖೆ ಆಗಲಿ ಎಂದು ಒಕ್ಕೋರಲಿನಿಂದ ಒತ್ತಾಯಿಸಿದ್ದಾರೆ. ಈ ವಿಚಾರವನ್ನು ಮೊದಲು ಪ್ರಸ್ತಾಪ ಮಾಡಿದ್ದೇ ನಾನು. ಈಗ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದೆ ಐ ಆ್ಯಮ್ ಸೋ ಹ್ಯಾಪಿ ಎಂದು ವಿಶ್ವನಾಥ್​ ಹೇಳಿದ್ರು.

ABOUT THE AUTHOR

...view details