ಕರ್ನಾಟಕ

karnataka

By

Published : May 6, 2023, 2:31 PM IST

Updated : May 6, 2023, 5:51 PM IST

ETV Bharat / state

ನರೇದ್ರ ಮೋದಿಯವರು ಎಷ್ಟು ಬಾರಿ ಬಂದರೂ, ಮತದಾರರ ಮೇಲೆ ಪರಿಣಾಮ ಆಗಲ್ಲ: ಸಿದ್ದರಾಮಯ್ಯ

ಮಾಧ್ಯಮ ಸಂವಾದ ಕಾರ್ಯಕ್ರಮ: ಬೆಂಗಳೂರಿನಲ್ಲಿ 50 ಸಾವಿರ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯುತ್ತಿದ್ದಾರೆ. ಅನಗತ್ಯ ರಸ್ತೆ ನಿರ್ಬಂಧದಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುವುದಿಲ್ಲವೇ. ನನಗೆ ಗಂಗಾವತಿಗೆ ಹೋಗಲು ಪರ್ಮಿಷನ್ ಕೊಡಲಿಲ್ಲ. ಆದರೆ, ಮೋದಿ ಪ್ರಚಾರಕ್ಕೆ ಯಾವುದೇ ವಿರೋಧ ಇಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Former CM Siddaramaiah spoke.
ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಸಿದ್ದರಾಮಯ್ಯ

ಮೈಸೂರು:ಭ್ರಷ್ಟಾಚಾರ ತಡೆಯುವ ಬದ್ಧತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಇಲ್ಲ. ಅವರು ಎಷ್ಟು ಬಾರಿ ಕರ್ನಾಟಕಕ್ಕೆ ಬಂದರೂ, ಮತದಾರರ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವುದಿಲ್ಲ. ಕಾಂಗ್ರೆಸ್ ಈ ಬಾರಿ ಕರ್ನಾಟಕದಲ್ಲಿ ಸ್ಪಷ್ಟ ಬಹುಮತ ಪಡೆಯಲಿದ್ದು, ನಾವು ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸುತ್ತೇವೆ. ನಾನು ಸಹ ವರುಣಾದಿಂದ ಅತಿ ಹೆಚ್ಚು ಲೀಡ್ ನಿಂದ ಗೆಲ್ಲುತ್ತೇನೆ ಎಂದು ಮೈಸೂರಿನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತರ ಭವನದಲ್ಲಿ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಎಷ್ಟು ಬಾರಿ ಆಗಮಿಸಿದರು ಮತದಾರರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ಯಾಕೆ ಹೆಚ್ಚು ಬಾರಿ ಮೋದಿ ಕರ್ನಾಟಕಕ್ಕೆ ಬರುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ನೀಡಿದ ಸಿದ್ದರಾಮಯ್ಯ, ರಾಜ್ಯ ಬಿಜೆಪಿಯವರಿಗೆ ಮತ ಕೇಳುವ ನೈತಿಕತೆ ಕಳೆದುಕೊಂಡಿದ್ದಾರೆ. ಅದಕ್ಕೆ ಮೋದಿಯವರು ಹೆಚ್ಚು ಬಾರಿ ಬಂದರೆ ಗೆಲ್ಲಬಹುದು ಎಂಬ ಭ್ರಮೆಯಲ್ಲಿ ರಾಜ್ಯ ಬಿಜೆಪಿಯವರು ಇದ್ದಾರೆ. ಮೋದಿ ಎಷ್ಟು ಬಾರಿ ಬಂದರು ಮತದಾರರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಟಾಂಗ್​ ಕೊಟ್ಟರು.

ಶೋಭಾ ಕರಂದ್ಲಾಜೆ ಹೇಳಿಕೆಗೆ ತಿರುಗೇಟು:ಕಾಂಗ್ರೆಸ್ ಪಕ್ಷದ ಬಗ್ಗೆ ಶೋಭಾ ಕರಂದ್ಲಾಜೆ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಬೆಂಗಳೂರಿನಲ್ಲಿ 50 ಸಾವಿರ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯುತ್ತಿದ್ದಾರೆ. ಅನಗತ್ಯ ರಸ್ತೆ ನಿರ್ಬಂಧ ಮಾಡುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುವುದಿಲ್ಲವೇ. ನನಗೆ ಗಂಗಾವತಿಗೆ ಹೋಗಲು ಪರ್ಮಿಷನ್ ಕೊಡಲಿಲ್ಲ. ಆದರೆ ಮೋದಿ ಪ್ರಚಾರಕ್ಕೆ ಯಾವುದೇ ವಿರೋಧ ಇಲ್ಲ. ಇವರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಒಂದು ದಿನ ಮುಂಚೆಯೇ ಬರಲು ಆಗುವುದಿಲ್ಲವೇ, ಇವರು ಹೇಳಿದ ಹಾಗೆಯೇ ನಡೆಯಬೇಕೇ ಎಂದು ಶೋಭಾ ಕರಂದ್ಲಾಜೆ ಹೇಳಿಕೆಗೆ ತಿರುಗೇಟು ನೀಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ :ಕರ್ನಾಟಕದಲ್ಲಿ ಈ ಬಾರಿ ನಡೆಯುವ ಚುನಾವಣೆ ರಾಷ್ಟ್ರ ಮಟ್ಟದ ರಾಜಕೀಯ ದೃಷ್ಟಿಯಿಂದ ಪ್ರಾಮುಖ್ಯತೆ ಪಡೆದಿದೆ. ಕರ್ನಾಟಕದಲ್ಲಿ ಬಿಜೆಪಿ ವಿರುದ್ಧದ ಅಲೆ ಬೀಸುತ್ತಿದ್ದು. ಜನರು ಬಿಜೆಪಿ ಸರ್ಕಾರದ ವಿರುದ್ಧ ಬೇಸತ್ತಿದ್ದು, ಬದಲಾವಣೆ ಬಯಸುತ್ತಿದ್ದಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ಈ ಬಾರಿ ಅತಂತ್ರ ಸರ್ಕಾರ ಬರುವುದಿಲ್ಲ, ಸ್ಪಷ್ಟವಾಗಿ ಕಾಂಗ್ರೆಸ್​​ಗೆ ಬಹುಮತ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅತಂತ್ರ ಸರ್ಕಾರದಿಂದ ಆಪರೇಷನ್ ಕಮಲ, ಭ್ರಷ್ಟಾಚಾರ ಹೆಚ್ಚಾಗಿದ್ದು ಇದರಿಂದ ರಾಜ್ಯದ ಜನ ಬೇಸತ್ತಿದ್ದಾರೆ. ಮೋದಿಯವರ ಭಾಷಣ ಕೇವಲ ಭರವಸೆ ಆಗಿದೆ. ಇದರಿಂದ ಜನರಿಗೆ ಬಿಜೆಪಿ ಬಗ್ಗೆ ಭರವಸೆ ಹೋಗಿದೆ. ಆದ್ದರಿಂದ ನಮಗೆ ಬಹುಮತ ಕೊಡುವುದು ಗ್ಯಾರಂಟಿ, ನಾವು ಅಧಿಕಾರಕ್ಕೆ ಬಂದ ತಕ್ಷಣ ನಾವು ಕೊಟ್ಟ ಗ್ಯಾರಂಟಿ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಂವಾದದಲ್ಲಿ ಸಿದ್ದರಾಮಯ್ಯ ಹೇಳಿದರು.

ವರುಣಾದಲ್ಲಿ ಗೆಲುವು ನನ್ನದೇ:ಇದು ನನ್ನ ರಾಜಕೀಯ ಜೀವನದ ಕೊನೆಯ ಚುನಾವಣೆ, ಆದ್ದರಿಂದ ನನ್ನ ಕೊನೆಯ ಚುನಾವಣೆಯನ್ನು ವರುಣಾದಿಂದ ಸ್ಪರ್ಧೆ ಮಾಡಲು ನಿರ್ಧರಿಸಿದ್ದೇನೆ. ವರುಣಾದ ಜನ ಜಾತಿವಾದಿಗಳಲ್ಲ. ಬಿಜೆಪಿಯವರು ಮಾಡುವ ಷಡ್ಯಂತ್ರ ಮೆಟ್ಟಿ ನಿಂತು ನೂರಕ್ಕೆ ನೂರರಷ್ಟು ಜನರ ಆಶಿರ್ವಾದದಿಂದ ವರುಣಾದಲ್ಲಿ ಅತಿ ಹೆಚ್ಚು ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದ ಸಿದ್ದರಾಮಯ್ಯ.

ಈ ಬಾರಿ ಚುನಾವಣಾ ಪ್ರಚಾರಕ್ಕೆ ಮೊಮ್ಮಗ ಧವನ್ ರಾಕೇಶ್ ಕರೆದುಕೊಂಡು ಬಂದು ಉತ್ತರಾಧಿಕಾರಿಯಾಗಿ ಬಿಂಬಿಸಿಲ್ಲ, ಆತನಿಗೆ ಇನ್ನೂ 17 ವರ್ಷ ದೊಡ್ಡವನಾದ ಮೇಲೆ ನೋಡೋಣ ಎಂದು ಸಂವಾದದಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.

ಇದನ್ನೂಓದಿ:ಬೆಂಗಳೂರಲ್ಲಿ ಪ್ರಧಾನಿ ಮೋದಿ ರೋಡ್ ಶೋ ಆರಂಭ : ಎರಡು ಗಂಟೆ ಭರ್ಜರಿ ಮತಬೇಟೆ

Last Updated : May 6, 2023, 5:51 PM IST

ABOUT THE AUTHOR

...view details