ಮೈಸೂರು: ಒಳ ಉಡುಪಿನಲ್ಲಿ ಅಂಬೇಡ್ಕರ್ ಭಾವಚಿತ್ರ ಎಡಿಟ್ ಮಾಡಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆ ಫೋಟೋವನ್ನು ತನ್ನ ಫೇಸ್ಬುಕ್ ಖಾತೆಯಿಂದ ಶೇರ್ ಮಾಡಿದ ವ್ಯಕ್ತಿಯ ವಿರುದ್ಧ ದೂರು ದಾಖಲಿಸಲಾಗಿದೆ.
ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಆರೋಪ: ಪೋಸ್ಟ್ ಶೇರ್ ಮಾಡಿದ ವ್ಯಕ್ತಿಯ ಬಂಧನ - Insult to ambedkar photo in mYsore
ಒಳ ಉಡುಪಿನಲ್ಲಿ ಅಂಬೇಡ್ಕರ್ ಭಾವಚಿತ್ರ ಎಡಿಟ್ ಮಾಡಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆ ಫೋಟೋವನ್ನು ತನ್ನ ಫೇಸ್ಬುಕ್ ಖಾತೆಯಿಂದ ಶೇರ್ ಮಾಡಿದ ವ್ಯಕ್ತಿಯ ವಿರುದ್ಧ ದೂರು ದಾಖಲಿಸಲಾಗಿದೆ.

ಮಂಜುನಾಥ್
ಹುಣಸೂರಿನ ಮಂಜುನಾಥ್ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದ ಒಳ ಉಡುಪಿನಲ್ಲಿ ಅಂಬೇಡ್ಕರ್ ಭಾವಚಿತ್ರವಿರುವ ಪೋಸ್ಟ್ ತಮ್ಮ ಫೇಸ್ಬುಕ್ ಖಾತೆಯಿಂದ ಶೇರ್ ಮಾಡಿದ್ದಾರೆ. ಈ ಕುರಿತು ಮಂಜುನಾಥ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪುಟ್ಟರಾಜ ಎಂಬುವವರು ಹುಣಸೂರು ಪಟ್ಟಣ ಠಾಣೆಗೆ ದೂರು ನೀಡಿದ್ದಾರೆ. ಮಂಜುನಾಥ್ ವಿರುದ್ಧ ಎಫ್ಐಆರ್ ದಾಖಲು ಮಾಡಿ ಬಂಧಿಸಿದ್ದಾರೆ.
ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ