ಮೈಸೂರು : ಐಷಾರಾಮಿ ಕಾರುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ, ಆಂಧ್ರ ಮೂಲದ ಅಂತಾರಾಜ್ಯ ಕಾರು ಕಳ್ಳನನ್ನು ಕಳೆದ ಎರಡು ದಿನಗಳ ಹಿಂದೆ ನಗರದ ಪೊಲೀಸರು ಬಂಧಿಸಿದ್ದರು. ಈತನಿಂದ ಮೂರು ಐಷಾರಾಮಿ ಕಾರುಗಳು, ಮೂರು ದುಬಾರಿ ಬೆಲೆಯ ವಾಚ್ಗಳು ಹಾಗೂ 750 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಎಂದು ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿ, 35ವರ್ಷದ ಆರೋಪಿ ಆಂಧ್ರ ಪ್ರದೇಶ, ತಮಿಳುನಾಡು, ಕರ್ನಾಟಕ ಸೇರಿದಂತೆ ಹಲವು ಕಡೆ 56 ಕೇಸ್ಗಳಲ್ಲಿ ಭಾಗಿಯಾಗಿದ್ದಾನೆ. 1,19,61,706 ರೂ. ಬೆಲೆಯ ಮೂರು ಕಾರುಗಳು, ಮೂರು ದುಬಾರಿ ಬೆಲೆಯ ವಾಚ್ ಹಾಗೂ 750 ಗ್ರಾಂ ತೂಕದ ಚಿನ್ನಾಭರಣವನ್ನು ವಶಪಡಿಸಿಕೊಂಡಿದದ್ದಾರೆ. ಈತ ಆಂಧ್ರ ಮೂಲದವನೆಂದು ಗೊತ್ತಾಗಿದೆ. ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕಿರುವುದರಿಂದ ಆತನ ಹೆಸರು ಹಾಗೂ ಇತರ ವಿವರಗಳನ್ನು ನೀಡಲು ಕಮಿಷನರ್ ನಿರಾಕರಿಸಿದ್ದು, ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದರೆ ಮತ್ತಷ್ಟು ಪ್ರಕರಣಗಳು ಹೊರಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಕಣ್ಣಿಗೆ ಖಾರದಪುಡಿ ಎರಚಿ ಹಣ ದರೋಡೆ; ಐವರ ಬಂಧನ :ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜುಲೈ 26ರಂದು ಹೆಬ್ಬಾಳದ ಬ್ಯಾಂಕಿಗೆ ಹಣ ಕಟ್ಟಲು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಕಣ್ಣಿಗೆ ಖಾರದಪುಡಿ ಎರಚಿ 6ಲಕ್ಷ ರೂ. ಹಣ ದರೋಡೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತಂಡ ರಚನೆ ಮಾಡಿದ್ದು, ಸೋಮವಾರ 5 ಜನ ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ. ಇವರಿಂದ 4.35 ಲಕ್ಷ ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಕೃತ್ಯಕ್ಕೆ ಬಳಸಿದ್ದ ಸೈಕಲ್ ಹಾಗೂ ಸ್ಕೂಟರ್ ಅನ್ನು ವಶಪಡಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಇದೇ ಸಂದರ್ಭದಲ್ಲಿ ಕಮಿಷನರ್ ಹೇಳಿದರು.