ಕರ್ನಾಟಕ

karnataka

ತನ್ವೀರ್ ಸೇಠ್​ಗೆ ಸಚಿವ ಸ್ಥಾನ ನೀಡಲು ಈಶ್ವರ್ ಖಂಡ್ರೆಗೆ ಮನವಿ

ಮೈಸೂರು ಭಾಗದ ಯಾವೊಬ್ಬ ಶಾಸಕರೂ ಮೈತ್ರಿ ಸರ್ಕಾರದಲ್ಲಿ ಮಂತ್ರಿಯಾಗಿಲ್ಲ. ಇದರಿಂದ ನಮ್ಮ ಕೆಲಸ ಮಾಡಿಸಿಕೊಳ್ಳಲು ಕಷ್ಟವಾಗಿದೆ ಎಂದು ಮೈಸೂರಿನ ಕಾಂಗ್ರೆಸ್​ ಮುಖಂಡರು ಹಾಗೂ ಪದಾಧಿಕಾರಿಗಳು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರಿಗೆ ಹೇಳಿದ್ದಾರೆ.

By

Published : Jun 23, 2019, 4:43 PM IST

Published : Jun 23, 2019, 4:43 PM IST

ಕಾಂಗ್ರೆಸ್​ನ ಮುಖಂಡರು ಹಾಗೂ ಪದಾಧಿಕಾರಿಗಳು ತನ್ವೀರ್ ಸೇಠ್​ಗೆ ಸಚಿವ ಸ್ಥಾನ ನೀಡಲು ಈಶ್ವರ್ ಖಂಡ್ರೆಗೆ ಮನವಿ ಮಾಡಿದರು.

ಮೈಸೂರು:ಶಾಸಕ ತನ್ವೀರ್ ಸೇಠ್​ಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರಿಗೆ ಮನವಿ ಮಾಡಿದರು.

ಕಾಂಗ್ರೆಸ್​ನ ಮುಖಂಡರು ಹಾಗೂ ಪದಾಧಿಕಾರಿಗಳು ತನ್ವೀರ್ ಸೇಠ್​ಗೆ ಸಚಿವ ಸ್ಥಾನ ನೀಡಲು ಈಶ್ವರ್ ಖಂಡ್ರೆಗೆ ಮನವಿ ಮಾಡಿದರು.

ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ಮುಗಿದ ಬಳಿಕ ಮುಖಂಡರು ಹಾಗೂ ಕಾರ್ಯಕರ್ತರು ,ಮೈಸೂರು ಭಾಗದಲ್ಲಿ ಕಾಂಗ್ರೆಸ್ ಶಾಸಕರೊಬ್ಬರಿಗೂ ಮಂತ್ರಿಸ್ಥಾನ ಸಿಕ್ಕಿಲ್ಲ.

ಅಲ್ಲದೇ ನಮ್ಮ ಕೆಲಸಗಳನ್ನು ಮಾಡಿಸಿಕೊಳ್ಳಲು ಕಷ್ಟವಾಗುತ್ತಿದೆ. ಆದ್ದರಿಂದ ತನ್ವೀರ್ ಸೇಠ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕು. ಇಲ್ಲವಾದರೆ ಈ ಭಾಗದ ಕಾಂಗ್ರೆಸ್​ ಮುಖಂಡರು ಹಾಗೂ ಪದಾಧಿಕಾರಿಗಳು ರಾಜೀನಾಮೆ ಸಲ್ಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ , ಪಕ್ಷದ ಮುಖಂಡರ ಗಮನಕ್ಕೆ ತರಲಾಗುವುದು ಎಂದು ಮನವಿ ಮಾಡಿದವರಿಗೆ ಭರವಸೆ ನೀಡಿದರು.

For All Latest Updates

TAGGED:

ABOUT THE AUTHOR

...view details