ಕರ್ನಾಟಕ

karnataka

ETV Bharat / state

ಮೈಸೂರಿನಲ್ಲಿ ಐಟಿ ದಾಳಿ: ಅಲಂಕಾರಿಕ ಗಿಡದಲ್ಲಿ ಸಿಕ್ತು 1 ಕೋಟಿ ಹಣ! - Etv Bharat Kannada

ಕಾಂಗ್ರೆಸ್​ ಅಭ್ಯರ್ಥಿಯೊಬ್ಬರ ಸಹೋದರನ ಮನೆ ಮೇಲೆ ಐಟಿ ದಾಳಿ ನಡೆದಿದ್ದು, ಮನೆಯಲ್ಲಿ ಅಲಂಕಾರಿಕ ಗಿಡದಲ್ಲಿ 1 ಕೋಟಿ ಹಣ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

it raid in mysuru
it raid in mysuru

By

Published : May 3, 2023, 12:00 PM IST

Updated : May 5, 2023, 11:53 AM IST

ಮೈಸೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯೊಬ್ಬರ ಸೋದರ ಎನ್ನಲಾಗಿರುವ ಕೆ.ಸುಬ್ರಮಣ್ಯ ರೈ ಎಂಬುವವರ ಮೈಸೂರಿನ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ‌ ನಡೆಸಿದೆ. ಈ ವೇಳೆ ಮನೆ ಮುಂಭಾಗದ ಅಲಂಕಾರಿಕ ಗಿಡದೊಳಗೆ ಹಣ್ಣಿನ ಬಾಕ್ಸ್​ಗಳಲ್ಲಿ ಇಟ್ಟಿದ್ದ ಹಣವನ್ನು ಐಟಿ ಅಧಿಕಾರಿಗಳು ವಶಪಡಿಸಿಕೊಂಡಿರುವುದನ್ನು ಮೂಲಗಳು ಖಚಿತಪಡಿಸಿವೆ.

ಕೆ.ಸುಬ್ರಹ್ಮಣ್ಯ ರೈ ಎಂಬುವವರು ಮೈಸೂರು ನಗರದ ನಿವಾಸಿಯಾಗಿದ್ದು, ಇವರ ಮನೆಯ ಮೇಲೆ ಸೋಮವಾರ ಸಂಜೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ ಸಂದರ್ಭದಲ್ಲಿ ಇವರ ಮನೆಯ ಗಾರ್ಡನ್​ನಲ್ಲಿದ್ದ ಅಲಂಕಾರಿಕ ಗಿಡದ ಒಳಗೆ ಇರುವ ಬಾಕ್ಸ್​ಗಳಲ್ಲಿ ಪ್ಯಾಕ್ ಮಾಡಿ ಒಂದು ಕೋಟಿ ರೂ ಹಣ ಬಚ್ಚಿಟ್ಟಿದ್ದು, ಅಧಿಕಾರಿಗಳು ಪತ್ತೆ ಹಚ್ಚಿ ಹಣ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಐಟಿ ಮೂಲಗಳಿಂದ ತಿಳಿದು ಬಂದಿದೆ. ಮಂಗಳವಾರವೂ ಸಹ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನಲ್ಲಿ ಐಟಿ ದಾಳಿ

ವಿಡಿಯೋ ವೈರಲ್:ಕೆ.ಸುಬ್ರಹ್ಮಣ್ಯ ರೈ ಅವರ ಮೈಸೂರು ಮನೆಯ ಗಾರ್ಡನ್ ಅಲಂಕಾರಿಕ ಗಿಡದಲ್ಲಿ ಬಚ್ಚಿಟ್ಟಿದ್ದ ಒಂದು ಕೋಟಿ ಹಣದ ಬಾಕ್ಸ್​, ಅಧಿಕಾರಿಗಳು ಹಣ ಎಣಿಸುತ್ತಿರುವ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇಂದೂ ಸಹ ಮೈಸೂರಿನಲ್ಲಿ ಐಟಿ ರೇಡ್:ಮೈಸೂರಿನ ಪ್ರಸಿದ್ಧ ಸಿಹಿತಿಂಡಿ ತಯಾರಕರು ಹಾಗೂ ಮಾರಾಟಗಾರರು ಜೊತೆಗೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವರ ಅಂಗಡಿಗಳು, ಮನೆ, ಕಚೇರಿಗಳ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ, ಬೇರೆ ಕಡೆಯಿಂದ ಬಂದ ಸುಮಾರು 20 ಜನ ಐಟಿ ಅಧಿಕಾರಿಗಳು, ರಿಯಲ್​ ಎಸ್ಟೇಟ್​ ವ್ಯವಹಾರಕ್ಕೆ ಸಂಬಂಧಿಸಿದವರ ಆಸ್ತಿಗಳ ಐದು ಕಡೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿಯ ಬಿಲ್ಡರ್ಸ್ ಮನೆ, ಕಚೇರಿ ಮೇಲೆ ಐಟಿ ದಾಳಿ: ದಾಖಲೆ ಪರಿಶೀಲನೆ

Last Updated : May 5, 2023, 11:53 AM IST

ABOUT THE AUTHOR

...view details