ಕರ್ನಾಟಕ

karnataka

ETV Bharat / state

ಮೈಸೂರಲ್ಲಿ ಇಂದಿನಿಂದ 2 ದಿನಗಳ ಕಾಲ ಜೆಡಿಎಸ್ ಕಾರ್ಯಾಗಾರ: ಅಭ್ಯರ್ಥಿಗಳಿಗೆ ಚುನಾವಣೆ ಪಾಠ - ಈಟಿವಿ ಭಾರತ ಕನ್ನಡ

ನವೆಂಬರ್ 1ರಿಂದ ಪಂಚರತ್ನ ರಥಯಾತ್ರೆ ಅರಂಭವಾಗುತ್ತಿದ್ದು, ಯಾತ್ರೆಯ ಅಂತಿಮ ಹಂತದ ಸಿದ್ಧತೆಗಳ ಬಗ್ಗೆ ಮೈಸೂರಿನಲ್ಲಿ 2 ದಿನಗಳ ಕಾಲನಡೆಯುವ ಸಭೆಯಲ್ಲಿ ಚರ್ಚೆ ನಡೆಯಲಿದೆ.

Etv Bharatjds-consultation-workshop-for-2-days-in-mysore-from-today
Etv Bharatಇಂದಿನಿಂದ ಮೈಸೂರಿನಲ್ಲಿ 2 ದಿನಗಳ ಕಾಲ ಜೆಡಿಎಸ್ ಸಮಾಲೋಚನಾ ಕಾರ್ಯಾಗಾರ

By

Published : Oct 18, 2022, 10:06 PM IST

Updated : Oct 19, 2022, 6:53 AM IST

ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಕುರಿತು ಹಾಗೂ ನವೆಂಬರ್ 1ರಿಂದ ಆರಂಭವಾಗಲಿರುವ ಪಂಚರತ್ನ ರಥಯಾತ್ರೆ, ಪಕ್ಷ ಸಂಘಟನೆ ಸೇರಿದಂತೆ ಇತ್ಯಾದಿ ಪ್ರಮುಖ ಅಂಶಗಳ ಬಗ್ಗೆ ಜಾತ್ಯತೀತ ಜನತಾದಳ ಪಕ್ಷವು ಮೈಸೂರಿನಲ್ಲಿ ಇಂದಿನಿಂದ ಎರಡು ದಿನ ಸಮಾಲೋಚನಾ ಕಾರ್ಯಾಗಾರ ಹಮ್ಮಿಕೊಂಡಿದೆ. ಇದರಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಪಕ್ಷದ ವರಿಷ್ಠ ಹೆಚ್.ಡಿ ದೇವೇಗೌಡ, ಇತರರು ಭಾಗವಹಿಸಲಿದ್ದಾರೆ.

ಜೊತೆಗೆ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಕಾಷೆಂಪೂರ್, ಸಂಸದೀಯ ಮಂಡಳಿ ಅಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಮುಂಬರುವ ವಿಧಾನಸಭೆ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳು, ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರು ಸೇರಿದಂತೆ ಆಯ್ದ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಪಂಚರತ್ನ ರಥಯಾತ್ರೆ:ನವೆಂಬರ್ 1ರಿಂದ ಪಂಚರತ್ನ ರಥಯಾತ್ರೆ ಅರಂಭವಾಗುತ್ತಿದ್ದು, ಯಾತ್ರೆಯ ಅಂತಿಮ ಹಂತದ ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಅಲ್ಲದೆ, ರಥಯಾತ್ರೆ ಹೇಗಿರುತ್ತದೆ? ಅದರ ಸ್ವರೂಪವೇನು? ಯಾವ ಮಾರ್ಗದಲ್ಲಿ ಸಾಗುತ್ತದೆ? ಗ್ರಾಮ ವಾಸ್ತವ್ಯ, ಜನ ಸಂಪರ್ಕ ಸಭೆ, ಸಮಾವೇಶ ಇತ್ಯಾದಿ ಪ್ರಮುಖ ಅಂಶಗಳ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುವುದು.

ಈ ಪೈಕಿ ಪಂಚರತ್ನ ಕಾರ್ಯಕ್ರಮಗಳಾದ ಶಿಕ್ಷಣ, ಆರೋಗ್ಯ, ಯುವ ಮತ್ತು ಮಹಿಳಾ ಸಬಲೀಕರಣ, ಕೃಷಿ - ನೀರಾವರಿ, ಉದ್ಯೋಗ, ವಸತಿ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನದಟ್ಟು ಮಾಡಿಕೊಡುವ ಬಗ್ಗೆ ಸಭೆಯಲ್ಲಿ ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಅಭ್ಯರ್ಥಿಗಳಿಗೆ ಚುನಾವಣೆ ಪಾಠ:ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅನುಸರಿಸಬಹುದಾದ ಕಾರ್ಯತಂತ್ರದ ಬಗ್ಗೆ ಸಭೆಯಲ್ಲಿ ಪ್ರಮುಖವಾಗಿ ಚರ್ಚೆಯಾಗಲಿದೆ ಎಂದಿರುವ ಮಾಜಿ ಮುಖ್ಯಮಂತ್ರಿಗಳು, ಪ್ರತಿ ಕ್ಷೇತ್ರವೂ ನಮಗೆ ಮುಖ್ಯವಾಗಿದೆ. ಬಿಡದಿಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳಿಗೆ ಕೆಲ ಟಾಸ್ಕುಗಳನ್ನು ಕೊಡಲಾಗಿತ್ತು. ಕೆಲವರು ಆ ಟಾಸ್ಕುಗಳನ್ನು ಅತ್ಯುತ್ತಮವಾಗಿ ಪೂರ್ಣಗೊಳಿಸಿದ್ದಾರೆ. ಕೆಲವರು ಪ್ರಾಮಾಣಿಕವಾಗಿ ಪೂರ್ಣಗೊಳಿಸಲು ಯತ್ನಿಸಿದ್ದಾರೆ. ಈ ಬಗ್ಗೆ ಸಭೆಯಲ್ಲಿ ಕೂಲಂಕಷವಾಗಿ ಗಮನಿಸಿ ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದು ಹೇಳಿದ್ದಾರೆ.

ಮನೆ ಮನೆಯ ಮೇಲೆಯೂ ಕನ್ನಡ ಬಾವುಟ:ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ನಿಮಿತ್ತ ಮನೆ ಮನೆಯ ಮೇಲೆ ಕನ್ನಡ ಬಾವುಟ ಹಾರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಪಕ್ಷವು ರಾಜ್ಯದ ಜನತೆಯ ಜತೆಗೂಡಿ ಮಾಡುವ ಉದೇಶ ಹೊಂದಿದೆ. ಈ ಕಾರ್ಯಕ್ರಮದ ಸ್ವರೂಪ, ಪಕ್ಷದ ಪಾಲ್ಗೊಳ್ಳುವಿಕೆ ಮುಂತಾದ ಅಂಶಗಳ ಬಗ್ಗೆ ಸಭೆಯಲ್ಲಿ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಪಕ್ಷವು ಬೇರೆಯದೇ ದಿಕ್ಕಿನಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಹೊರತಾದ ಜನಪರ ದಾರಿಯಲ್ಲಿ ಪ್ರಯಾಣ ಮಾಡುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಆಡಳಿತದಿಂದ ರೋಸಿ ಹೋಗಿರುವ ಜನರಿಗೆ ಜನಪರ ಸರ್ಕಾರ ನೀಡಬೇಕು ಎಂಬ ಉದ್ದೇಶದಿಂದಲೇ ಪಕ್ಷವು ಕೆಲಸ ಮಾಡುತ್ತಿದೆ. ಆ ನಿಟ್ಟಿನಲ್ಲಿ ಮೈಸೂರಿನ ಸಭೆ ನಿರ್ಣಾಯಕ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ :Paycm ಆಯ್ತು ಈಗ ಕಾಂಗ್ರೆಸ್ ನಿಂದ Saycm ಅಭಿಯಾನ ಆರಂಭ

Last Updated : Oct 19, 2022, 6:53 AM IST

ABOUT THE AUTHOR

...view details