ಕರ್ನಾಟಕ

karnataka

By

Published : Sep 26, 2020, 5:16 PM IST

ETV Bharat / state

ಮೈಸೂರು: ಸೋಮವಾರದ ಕರ್ನಾಟಕ ಬಂದ್​ಗೆ ಹಲವು ಸಂಘಟನೆಗಳ ಬೆಂಬಲ

ಮೈಸೂರು ಜಿಲ್ಲೆಯ ಐಕ್ಯ ಹೋರಾಟ ವೇದಿಕೆ, ಪ್ರಗತಿಪರ ಸಂಘಟನೆಗಳು, ರೈತ ಪರ ಸಂಘಟನೆಗಳು ಸೇರಿದಂತೆ ಸುಮಾರು 16 ಕನ್ನಡಪರ ಸಂಘಟನೆಗಳು ಸೋಮವಾರದ ಬಂದ್​ಗೆ ಬೆಂಬಲ ಸೂಚಿಸಿವೆ.

Karnataka band on Monday
ಸೆ.28 ರಂದು ಕರ್ನಾಟಕ ಬಂದ್

ಮೈಸೂರು: ಸುಗ್ರೀವಾಜ್ಞೆ ಮೂಲಕ ಮಸೂದೆಗಳನ್ನು ತಂದು ಸಂವಿಧಾನದ ಶಕ್ತಿಯನ್ನು ದುರ್ಬಲಗೊಳಿಸಿ, ಜನರ ಹಕ್ಕನ್ನು ಕಿತ್ತುಕೊಳ್ಳುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಖಂಡಿಸಿ ಐಕ್ಯ ಹೋರಾಟ ವೇದಿಕೆ ಸೋಮವಾರ ಬಂದ್​ಗೆ ಕರೆ ನೀಡಿದ್ದು, ಇದಕ್ಕೆ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿದೆ.

ಕರ್ನಾಟಕ ಬಂದ್​ಗೆ ಹಲವು ಸಂಘಟನೆಗಳ ಬೆಂಬಲ

ಸೆ.28 ರಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದ್ದು, ಈ ಹೋರಾಟಕ್ಕೆ ಮೈಸೂರು ಜಿಲ್ಲೆಯ ಐಕ್ಯ ಹೋರಾಟ ವೇದಿಕೆ, ಪ್ರಗತಿಪರ ಸಂಘಟನೆಗಳು, ರೈತ ಪರ ಸಂಘಟನೆಗಳು ಸೇರಿದಂತೆ ಸುಮಾರು 16 ಕನ್ನಡಪರ ಸಂಘಟನೆಗಳು ಸೋಮವಾರದ ಬಂದ್​ಗೆ ಬೆಂಬಲ ಸೂಚಿಸಿವೆ.

ಇಂದು ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಸಭೆ ನಡೆಸಿ ಈ ಕುರಿತು ಚರ್ಚಿಸಿದರು. ಈ ಎಲ್ಲಾ ಸಂಘಟನೆಗಳು ಸೋಮವಾರದ ಕರ್ನಾಟಕ ಬಂದ್​ಗೆ ಬೆಂಬಲ ಸೂಚಿಸಿವೆ.

ABOUT THE AUTHOR

...view details