ಕರ್ನಾಟಕ

karnataka

ರೆಮ್​ಡಿಸಿವಿರ್​​-ಆಕ್ಸಿಜನ್ ಖಾಸಗಿ ಆಸ್ಪತ್ರೆಗೆ ಸರಬರಾಜು: ಸಂಸದ ಪ್ರತಾಪ್ ಸಿಂಹ ವಿರುದ್ಧ ಲಕ್ಷ್ಮಣ್ ಆರೋಪ

ಕೊರೊನಾ ಕಾಲದಲ್ಲಿ ರೆಮ್​​ಡಿಸಿವಿರ್, ಆಕ್ಸಿಜನ್​ಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಹೆಚ್ಚಿಗೆ ಸರಬರಾಜು ಮಾಡುವ ಮೂಲಕ ಖಾಸಗಿ ಆಸ್ಪತ್ರೆಗಳಿಗೆ ಅನುಕೂಲ ಮಾಡಿಕೊಡುತ್ತಿದ್ದಾರೆ ಕೆಪಿಸಿಸಿ ವಕ್ತಾರ  ಎಂ. ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ.

By

Published : May 25, 2021, 9:21 PM IST

Published : May 25, 2021, 9:21 PM IST

ಸಂಸದ ಪ್ರತಾಪ್ ಸಿಂಹ ವಿರುದ್ಧ ಲಕ್ಷ್ಮಣ್ ಆರೋಪ
ಸಂಸದ ಪ್ರತಾಪ್ ಸಿಂಹ ವಿರುದ್ಧ ಲಕ್ಷ್ಮಣ್ ಆರೋಪ

ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಟಾಸ್ಕ್ ಫೋರ್ಸ್​​ನ ಸ್ವಯಂ ಘೋಷಿತ ಅಧ್ಯಕ್ಷರಾದ ಸಂಸದ ಪ್ರತಾಪ್‌ಸಿಂಹ ಖಾಸಗಿ ಆಸ್ಪತ್ರೆಗಳಿಗೆ ಹಣ ಮಾಡಿಕೊಡುವ ಮೂಲಕ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದ್ದಾರೆ.

ಸಂಸದ ಪ್ರತಾಪ್ ಸಿಂಹ ವಿರುದ್ಧ ಲಕ್ಷ್ಮಣ್ ಆರೋಪ

ಈಟಿವಿ ಭಾರತ್ ಜೊತೆ ಮಾತನಾಡಿದ ಎಂ.ಲಕ್ಷ್ಮಣ್, ಮೈಸೂರು ಜಿಲ್ಲಾಧಿಕಾರಿಗಳ ವಿರುದ್ಧ ಸಂಸದರು ಏಕೆ ತಿರುಗಿ ಬಿದ್ದಿದ್ದಾರೆ ? ಎಂಬ ಅನುಮಾನದಿಂದ ಕಾಂಗ್ರೆಸ್ ಮಾಹಿತಿ ಸಂಗ್ರಹಿಸಿದಾಗ ಪ್ರತಾಪ್‌ಸಿಂಹ ನಾನೇ ಎಲ್ಲವನ್ನೂ ಮಾಡುತ್ತೇನೆ ಎಂದು ರೆಮ್​​ಡಿಸಿವಿರ್, ಆಕ್ಸಿಜನ್​ಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಹೆಚ್ಚಿಗೆ ಸರಬರಾಜು ಮಾಡುವ ಮೂಲಕ ಖಾಸಗಿ ಆಸ್ಪತ್ರೆಗಳಿಗೆ ಅನುಕೂಲ ಮಾಡಿಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಸಂಸದ ಪ್ರತಾಪ್ ಸಿಂಹ ವಿರುದ್ಧ ಲಕ್ಷ್ಮಣ್ ಆರೋಪ

ಇನ್ನು ಸರ್ಕಾರಿ ಹಾಸ್ಟೇಲ್​ಗಳನ್ನು ಕೋವಿಡ್ ಕೇರ್ ಸೆಂಟರ್ ಮಾಡಿಕೊಂಡು ಅಲ್ಲಿ ಖಾಸಗಿಯವರು ದಿನಕ್ಕೆ ಸಾವಿರಾರು ರೂ. ವಸೂಲಿ ಮಾಡುತ್ತಿದ್ದು ಖಾಸಗಿ ಆಸ್ಪತ್ರೆಗಳು ಪ್ರತಾಪ್ ಸಿಂಹಗೆ ಪಾಲು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ABOUT THE AUTHOR

...view details