ಬೆಂಗಳೂರು: ಸೋಮವಾರದಿಂದ ಮೈಸೂರಿಗೆ ಬಸ್ ಸಂಚಾರ ಆರಂಭಿಸಲು KSRTC ಮುಂದಾಗಿದೆ. ಕೊರೊನಾ ಸೋಂಕು ಕಾರಣಕ್ಕೆ ಮೈಸೂರು ಹೊರತುಪಡಿಸಿ ಉಳಿದೆಲ್ಲ ಭಾಗಗಳಿಗೆ ಸಾರಿಗೆ ಸೇವೆ ಒದಗಿಸಲಾಗಿತ್ತು. ಕಳೆದ ಎರಡು ತಿಂಗಳಿಂದ ಮೈಸೂರಿಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಇರಲಿಲ್ಲ. ಇದೀಗ ಮೈಸೂರಿನಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ. 8.16 ರಷ್ಟು ಇದ್ದು, ಸೋಮವಾರದಿಂದ ಬಸ್ಗಳು ರಸ್ತೆಗಿಳಿಯಲಿವೆ.
ಮೈಸೂರಿನಲ್ಲಿ ಲಾಕ್ಡೌನ್ ಸಡಿಲ ಹಿನ್ನೆಲೆ ಜೂನ್-28 ರ ಬೆಳಗ್ಗೆ 6 ಗಂಟೆಯಿಂದ ಜನರ ಬೇಡಿಕೆ ಆಧರಿಸಿ ಬಸ್ ಸಂಚಾರ ಆರಂಭಿಸಲು ನಿಗಮ ಮುಂದಾಗಿದೆ.