ಮೈಸೂರು: ಕಾಡು ಪ್ರಾಣಿಗಳ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕಿನ ಹೊಸವಾರಂಚಿ ಬಳಿ ನಡೆದಿದೆ.
ಮೈಸೂರು: ಉರುಳಿಗೆ ಸಿಲುಕಿ ಚಿರತೆ ಸಾವು - ಮೈಸೂರಿನಲ್ಲಿ ಉರುಳಿಗೆ ಸಿಲುಕಿ ಚಿರತೆ ಸಾವು
ಮೈಸೂರಿನಲ್ಲಿ ಕಾಡು ಪ್ರಾಣಿಯ ಬೇಟೆಗಾಗಿ ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಮೃತಪಟ್ಟಿದೆ.
![ಮೈಸೂರು: ಉರುಳಿಗೆ ಸಿಲುಕಿ ಚಿರತೆ ಸಾವು Leopard dies after falling into a snare](https://etvbharatimages.akamaized.net/etvbharat/prod-images/768-512-10870224-thumbnail-3x2-hrss.jpg)
ಉರುಳಿಗೆ ಸಿಲುಕಿ ಚಿರತೆ ಸಾವು
ಹೊಸವಾರಂಚಿ ಗ್ರಾಮದ ರೈತ ಸಾದಿಕ್ ಇಕ್ಬಾಲ್ ಎಂಬವರ ಹೊಲದಲ್ಲಿ ಕಾಡು ಪ್ರಾಣಿಯ ಬೇಟೆಗಾಗಿ ಉರುಳು ಹಾಕಲಾಗಿತ್ತು. ಆಹಾರ ಅರಸಿ ಬಂದ 4 ವರ್ಷದ ಗಂಡು ಚಿರತೆ ಈ ಉರುಳಿಗೆ ಸಿಲುಕಿ ಮೃತಪಟ್ಟಿದೆ.
ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಚಿರತೆಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.