ಕರ್ನಾಟಕ

karnataka

ETV Bharat / state

ಆಸ್ತಿ ಕಲಹ: ಅಣ್ಣನ ಮಗನಿಂದಲೇ ಚಿಕ್ಕಪ್ಪನ ಕೊಲೆ! - Mysore

ಒಂದು ಗುಂಟೆ ಜಮೀನಿನ ಹಣಕಾಸು ವಿಚಾರದಲ್ಲಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.

Man murder by their brother son over land dispute
ಆಸ್ತಿ ಕಲಹ: ಅಣ್ಣನ ಮಗನಿಂದಲೇ ಚಿಕ್ಕಪ್ಪನ ಕೊಲೆ

By

Published : Apr 17, 2021, 1:31 PM IST

ಮೈಸೂರು:ಒಂದು ಗುಂಟೆ ಜಮೀನಿನ ಹಣಕಾಸು ವಿಚಾರದಲ್ಲಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಂಜನಗೂಡು ತಾಲೂಕು ಆಲಂಬೂರು ಗ್ರಾಮದಲ್ಲಿ ನಡೆದಿದೆ.

ಆಸ್ತಿ ಕಲಹ: ಅಣ್ಣನ ಮಗನಿಂದಲೇ ಚಿಕ್ಕಪ್ಪನ ಕೊಲೆ

ಗ್ರಾಮದ ಲಕ್ಷ್ಮಣ್​ (50) ಅಣ್ಣನ ಮಗನಿಂದ ಕೊಲೆಯಾದ ದುರ್ದೈವಿ. ಒಂದು ಗುಂಟೆ ಜಮೀನಿನ ಹಣಕಾಸು ವಿಚಾರದಲ್ಲಿ ಆರಂಭವಾದ ಗಲಾಟೆಯಿಂದ ರೊಚ್ಚಿಗೆದ್ದ ಅಣ್ಣನ ಮಗ ಸಿದ್ದರಾಜು ‌ಚಿಕ್ಕಪ್ಪನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಆಸ್ತಿ ಕಲಹ: ಅಣ್ಣನ ಮಗನಿಂದಲೇ ಚಿಕ್ಕಪ್ಪನ ಕೊಲೆ

ಶವಪರೀಕ್ಷೆಗಾಗಿ ಮೃತದೇಹವನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಡಿವೈಎಸ್​ಪಿ ಗೋವಿಂದರಾಜು, ವೃತ್ತನಿರೀಕ್ಷಕ ಲಕ್ಷ್ಮಿಕಾಂತ ತಳವಾರ್, ಬಿಳಿಗೆರೆ ಠಾಣೆ ಪಿಎಸ್ಐ ಭೇಟಿ ನೀಡಿ ಮಹಜರು ನಡೆಸಿ ತನಿಖೆ ಕೈಗೊಂಡಿದ್ದಾರೆ.

ಈ ಸಂಬಂಧ ಮೃತನ ಮಗಳು ಚೈತ್ರ ಬಿಳಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಓದಿ:ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ: ಈ ಫೈನಾನ್ಸ್ ವಿರುದ್ಧ ಎಫ್ಐಆರ್

ABOUT THE AUTHOR

...view details