ಕರ್ನಾಟಕ

karnataka

ETV Bharat / state

ಮೈಸೂರು: ಗೃಹಿಣಿ ಅನುಮಾನಾಸ್ಪದ ಸಾವು - ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

ಮೈಸೂರು ಜಿಲ್ಲೆ ಎಚ್.​ಡಿ. ಕೋಟೆ ತಾಲೂಕಿನ ಮಾದಾಪುರ ಗ್ರಾಮದ ವಿವಾಹಿತ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದು, ಮೃತಳ ಪೋಷಕರು ವರದಕ್ಷಿಣೆ ಕಿರುಕುಳ ಪ್ರಕರಣ ಎಂದು ಆರೋಪಿಸಿದ್ದಾರೆ.

mysore latest crime news
ಗೃಹಿಣಿ ಅನುಮಾನಾಸ್ಪದ ಸಾವು

By

Published : Jan 11, 2021, 7:20 PM IST

ಮೈಸೂರು:ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆಯಾಗಿರುವ ಘಟನೆ ನಂಜನಗೂಡು ತಾಲೂಕಿನ ಮಲ್ಕುಂಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವೀರಭದ್ರ ಎಂಬುವರ ಪತ್ನಿ ದಿವ್ಯಾ (26) ಮೃತ ದುರ್ದೈವಿ. ಎಚ್.​ಡಿ. ಕೋಟೆ ತಾಲೂಕಿನ ಮಾದಾಪುರ ಗ್ರಾಮದ ನಿವಾಸಿ ದಿವ್ಯಾಳನ್ನ 2 ವರ್ಷಗಳ ಹಿಂದೆ ಮಲ್ಕುಂಡಿ ಗ್ರಾಮದ ವೀರಭದ್ರನಿಗೆ ವಿವಾಹ ಮಾಡಿಕೊಡಲಾಗಿತ್ತು. ಇಬರಿಬ್ಬರ ದಾಂಪತ್ಯಕ್ಕೆ 1 ವರ್ಷದ ಹೆಣ್ಣು ಮಗುವಿದೆ.
ವರದಕ್ಷಿಣೆ ಕಿರುಕುಳದಿಂದ ಪತಿ ವೀರಭದ್ರ ಮತ್ತು ಕುಟುಂಬಸ್ಥರು ಹಲ್ಲೆ ಮಾಡಿ ನೇಣು ಹಾಕಿದ್ದಾರೆ ಎಂದು ದಿವ್ಯಾಳ ಪೋಷಕರ ಆರೋಪವಾಗಿದೆ. ಈ ಸಂಬಂಧ ಮೃತ ದಿವ್ಯಾಳ‌ ಸಹೋದರ ರಘು, ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ABOUT THE AUTHOR

...view details