ಕರ್ನಾಟಕ

karnataka

ಮಳೆ ಹಾನಿಯಿಂದ ತೊಂದರೆಗೊಳಗಾದ ಎಲ್ಲರಿಗೂ ಪರಿಹಾರ: ಸಚಿವ ಸೋಮಶೇಖರ್

By

Published : Aug 29, 2022, 8:17 PM IST

ಮೈಸೂರಿನ ಜಿ.ಪಂ ಕಚೇರಿಯಲ್ಲಿ ಮಳೆ ಹಾನಿಗೆ ಸಂಬಂಧಿಸಿದಂತೆ ಸಚಿವ ಎಸ್​ ಟಿ ಸೋಮಶೇಖರ್​ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

Minister Somashekhar
ಸಚಿವ ಎಸ್ ಟಿ ಸೋಮಶೇಖರ್ ಸಭೆ

ಮೈಸೂರು: ಮಳೆ ಹಾನಿಯಿಂದ ತೊಂದರೆಗೆ ಒಳಗಾದವರಿಗೆಲ್ಲ ಸೂಕ್ತ ರೀತಿಯಲ್ಲಿ ಪರಿಹಾರ ವಿತರಣೆ ಮಾಡಬೇಕು. ಮನೆ ಹಾನಿ, ಬೆಳೆ ಹಾನಿ ಆದವರಿಗೆ ಪರಿಹಾರ ವಿತರಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು. ಅಲ್ಲದೇ ಪರಿಹಾರ ವಿತರಣೆಯಲ್ಲಿ ಯಾವುದೇ ರಾಜಕೀಯ ಇಲ್ಲ ಎಂದೂ ಸ್ಪಷ್ಟಪಡಿಸಿದರು.

ಜಿಲ್ಲೆಯಲ್ಲಿ ಮಳೆಯಿಂದ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. 3,200 ಮನೆಗಳಿಗೆ ಹಾನಿಯಾಗಿದೆ. ಈ ಪೈಕಿ 2,497 ಮನೆಗಳಿಗೆ ಪರಿಹಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಸಚಿವರ ಗಮನಕ್ಕೆ ತಂದರು.

ಸಚಿವ ಎಸ್ ಟಿ ಸೋಮಶೇಖರ್ ಸಭೆ

ಕೆಆರ್​​ಎಸ್​​ನಲ್ಲಿ ಒಳ, ಹೊರ ಹರಿವು ಹೆಚ್ಚಳವಾಗಿದ್ದು, ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ. ವಾಡಿಕೆಗಿಂತ ಶೇ.72.8 ಹೆಚ್ಚುವರಿ ಮಳೆಯಾಗಿದೆ. 3,95,827 ಹೆಕ್ಟೇರ್ ಪೈಕಿ 3,05,127 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. 321 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗೆ ಹಾನಿಯಾಗಿದ್ದು, ಈ ಕುರಿತು ಜಂಟಿ ಸರ್ವೆ ಮಾಡಲಾಗುತ್ತಿದೆ. ಭತ್ತ, ಮುಸುಕಿನ ಜೋಳ, ಅಲಸಂದೆ ಬೆಳೆಗಳಿಗೆ ಹೆಚ್ಚು ಹಾನಿಯಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಇದನ್ನೂ ಓದಿ:ಕಾಂಗ್ರೆಸ್​ನ ಐಕ್ಯತಾ ನಡಿಗೆ ಬಗ್ಗೆ ನನಗೆ ಅರ್ಥವಾಗುತ್ತಿಲ್ಲ: ಸಚಿವ ಸೋಮಶೇಖರ್ ವ್ಯಂಗ್ಯ

29 ಮನೆಗಳಿಗೆ ನೀರು ನುಗ್ಗಿದೆ. 159 ಪ್ರಾಥಮಿಕ ಶಾಲಾ ಕಟ್ಟಡ, 15 ಅಂಗನವಾಡಿ, 13 ಪ್ರಾಥಮಿಕ ಆರೋಗ್ಯ ಕೇಂದ್ರ, 12 ಸೇತುವೆಗಳು, 335 ವಿದ್ಯುತ್ ಕಂಬಗಳು, 11 ಟ್ರಾನ್ಸ್ ಫಾರ್ಮರ್​ಗಳಿಗೆ ಹಾನಿಯಾಗಿದೆ. ಮೂರು ದಿನಗಳಿಂದ ಮಳೆಯಾಗುತ್ತಿದೆ. ಶಾಲೆಗಳಿಗೆ ಮಕ್ಕಳು ಆಗಮಿಸಿದ ಮೇಲೆ ರಜೆ ಘೋಷಣೆ ಮಾಡಿದ್ದರಿಂದ ಪೋಷಕರು ಗೊಂದಲಕ್ಕೀಡಾಗಿದ್ದಾರೆ. ಬಿಇಒ, ಡಿಡಿಪಿಐಗಳು ಎಡವಟ್ಟಿನಿಂದ ಈ ರೀತಿ ಆಗಿದೆ ಎಂದು ಸಚಿವರು ತರಾಟೆಗೆ ತೆಗೆದುಕೊಂಡರು.

ಲಿಂಗಾಂಬುದಿ ಕೆರೆ ನಿರ್ವಹಣೆ ಮಾಡುತ್ತಿಲ್ಲ. ರಾಜಕಾಲುವೆಗಳ ದುರಸ್ತಿಯಾಗಬೇಕು, ಮನೆಗಳಿಗೆ ನೀರು ಹೋಗದಂತೆ ನೋಡಿಕೊಳ್ಳಬೇಕು. ರಾಜಕಾಲುವೆ ದುರಸ್ತಿ ಮಾಡದೆ ಶಾಶ್ವತ ಪರಿಹಾರ ಅಸಾಧ್ಯ ಎಂದು ಶಾಸಕರುಗಳು ಸಚಿವರ ಗಮನಕ್ಕೆ ತಂದರು. ಈ ಕುರಿತು ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಮೂಡಾ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸಚಿವರು ನಿರ್ದೇಶಿಸಿದರು.

ABOUT THE AUTHOR

...view details