ಮೈಸೂರು :ಬಸವರಾಜ ಬೊಮ್ಮಾಯಿಯವರು ಕ್ರಿಕೆಟ್ ಕ್ಯಾಪ್ಟನ್ ಆಗಿದ್ದಾರೆ. ತಮ್ಮ ಮ್ಯಾಚ್ ಗೆಲ್ಲಬೇಕು ಅಷ್ಟೇ.. ಪಿಚ್ ವಾತಾವರಣ ನೋಡಿ ಆಟಗಾರರನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಶಾಸಕ ಎಸ್ ಎ ರಾಮದಾಸ್ ಹೇಳಿದರು.
ನಗರದ ಕಾಮಾಕ್ಷಿ ಆಸ್ಪತ್ರೆ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರು ಭಾಗಕ್ಕೆ ಮಂತ್ರಿ ಸ್ಥಾನ ಸಿಕ್ಕಿಲ್ಲ ಅನ್ನೋದು ಸಿಎಂಗೆ ಗೊತ್ತಿದೆ. ಅದರ ಬಗ್ಗೆ ಯಾರೂ ಹೇಳುವ ಅವಶ್ಯಕತೆ ಇಲ್ಲ. ಯಾಕೆ ಕೊಟ್ಟಿಲ್ಲ ಅನ್ನೋದನ್ನು ಅವರೇ ಹೇಳಬೇಕು ಎಂದರು.
ಯಾವ ಆಟಗಾರರು ಬೇಕು ಅವರನ್ನು ಕ್ಯಾಪ್ಟನ್ ಆಯ್ಕೆ ಮಾಡಿಕೊಳ್ಳಬೇಕು. ಈಗ ಬಸವರಾಜ ಬೊಮ್ಮಾಯಿಯವರು ಕ್ಯಾಪ್ಟನ್ ಆಗಿದ್ದಾರೆ. ಯಾರ ಸಲಹೆ ಪಡೆಯಬೇಕು ಎಂದು ಅವರಿಗೆ ಗೊತ್ತಿದೆ. ತಮ್ಮ ಮ್ಯಾಚ್ ಗೆಲ್ಲಬೇಕು ಅಷ್ಟೇ.. ಪಿಚ್ ವಾತಾವರಣ ನೋಡಿ ಆಟಗಾರರನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದರು.