ಮೈಸೂರು: ಮೂರು ದಿನದಲ್ಲೇ ವರದಿ ಕೊಡುತ್ತೇನೆ ಎಂದು ಹೇಳಿರುವ ಪ್ರಾದೇಶಿಕ ಆಯುಕ್ತರ ವರದಿಯ ಮೇಲೆ ನಂಬಿಕೆಯಿಲ್ಲ ಎಂದು ಹೆಚ್. ವಿಶ್ವನಾಥ್ ಹೇಳಿದರು. ಶಾಸಕ ಸಾ.ರಾ.ಮಹೇಶ್ ಒಡೆತನದ ಸಾ.ರಾ. ಕಲ್ಯಾಣ ಮಂಟಪ ರಾಜಕಾಲುವೆ ಮೇಲೆ ನಿರ್ಮಾಣವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗುರುವಾರ ಶಾಸಕರು ಸ್ವತಃ ತಾವೇ ಪ್ರಾದೇಶಿಕ ಆಯುಕ್ತರ ಕಚೇರಿಯ ಮುಂದೆ ತನಿಖೆಗಾಗಿ ಆಗ್ರಹಿಸಿ ಒಂಟಿ ಪ್ರತಿಭಟನೆ ನಡೆಸಿದ್ದರು.
ಆ ಸ್ಥಳಕ್ಕೆ ಬಂದ ಪ್ರಾದೇಶಿಕ ಆಯುಕ್ತರು ಮೂರು ದಿನದಲ್ಲಿ ವರದಿ ಕೊಡುವುದಾಗಿ ಹೇಳಿದ್ದರು. ಈ ಬಗ್ಗೆ ಇಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆಶ್ಚರ್ಯ ಹಾಗೂ ಅನುಮಾನ ವ್ಯಕ್ತಪಡಿಸಿದ್ದು, ಕೇವಲ ಮೂರು ದಿನದಲ್ಲಿ ವರದಿ ಕೊಡುವ ಬಗ್ಗೆ ನನಗೆ ನಂಬಿಕೆ ಇಲ್ಲ. ಇಲ್ಲಿ ಇಬ್ಬರ ನಡುವೆ ಒಳ ಒಪ್ಪಂದವಾಗಿದೆ ಎಂದು ಅಭಿಪ್ರಾಯಪಟ್ಟರು.