ಕರ್ನಾಟಕ

karnataka

ಪ್ರತಿಯೊಬ್ಬರೂ ಯೋಗ ಮಾಡುವುದನ್ನ ಬೆಳೆಸಿಕೊಳ್ಳಬೇಕು: ಸುತ್ತೂರು ಮಹಾಸ್ವಾಮಿ

By

Published : Jun 21, 2019, 12:39 PM IST

ಆಧುನಿಕ ಯುಗಕ್ಕೆ ಪ್ರಧಾನಿ ನರೇಂದ್ರ ಮೋದಿ ಕೊಡುಗೆ ಅತ್ಯಂತ ವಿಶಿಷ್ಟವಾಗಿದೆ ಎಂಬುದನ್ನು ಈ ದಿನ ನಾವೆಲ್ಲ ನೆನಪಿಸಿಕೊಳ್ಳಬೇಕು ಎಂದು ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದ್ದಾರೆ.

ಸುತ್ತೂರು ಮಹಾಸ್ವಾಮಿ

ಮೈಸೂರು: ಆಧುನಿಕ ಯುಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಅತ್ಯಂತ ವಿಶಿಷ್ಟವಾಗಿದೆ ಎಂಬುದನ್ನು ಈ ದಿನ ನಾವೆಲ್ಲ ನೆನಪಿಸಿಕೊಳ್ಳಬೇಕು ಎಂದು ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದ್ದಾರೆ.

ಇಂದು ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದ ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜಗತ್ತಿನಾದ್ಯಂತ ನಡೆಯುತ್ತಿದೆ. ಹಾಗೆಯೇ ಮೈಸೂರಿನಲ್ಲಿ ಸಹ ಈ ಕಾರ್ಯಕ್ರಮ ನಡೆಯುತ್ತಿದ್ದು, ಮೈಸೂರು ಮೊದಲಿನಿಂದಲೂ ಯೋಗಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ಯೋಗಾಭ್ಯಾಸ ಮಾಡಿದವರು ಜಗತ್ತಿನಾದ್ಯಂತ ಹಲವಾರು ಕಡೆಗಳಲ್ಲಿ ಯೋಗವನ್ನು ಕಲಿಸುತ್ತಿದ್ದಾರೆ. ಪತಂಜಲಿ ಮಹರ್ಷಿಗಳು ಈ ಯೋಗದ ಸಂಸ್ಥಾಪಕರು. ಪ್ರಧಾನಿ ಮೋದಿ ಯೋಗದ ಮೂಲಕ ಜಗತ್ತಿನಲ್ಲಿ ಭಾರತಕ್ಕೆ ಒಂದು ಸ್ಥಾನವನ್ನು ತಂದು ಕೊಟ್ಟಿದ್ದಾರೆ ಎಂದು ಹೊಗಳಿದರು.

ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ

ಪ್ರತಿಯೊಬ್ಬರೂ ಯೋಗವನ್ನು ಮಾಡಬೇಕು. ದೇಹ, ಮನಸ್ಸು ಪ್ರಶಾಂತವಾಗಿಟ್ಟುಕೊಳ್ಳಲು ಯೋಗವನ್ನು ಮೈಗೂಡಿಸಿಕೊಳ್ಳಬೇಕು ಎಂದರು.

TAGGED:

ABOUT THE AUTHOR

...view details