ಮೈಸೂರು : ನಗರದ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಗೆ 282 ಎಕರೆ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲು ಸಿಎಂ ಕುಮಾರಸ್ವಾಮಿ ಅನುಮತಿ ನೀಡಿದ್ದರು. ಇದಕ್ಕಾಗಿ ಸಿಎಂ ಕುಮಾರಸ್ವಾಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಡಿ.ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಬೆಂಗಳೂರು-ಮೈಸೂರು ನಡುವಿನ ವಿಮಾನ ಹಾರಾಟಕ್ಕೆ ಚಾಲನೆ ನೀಡಿ ನಂತರ ಮಾತನಾಡಿದ ಪ್ರತಾಪ್ ಸಿಂಹ, ವಿಮಾನ ನಿಲ್ದಾಣದ ಅಭಿವೃದ್ಧಿ 282 ಎಕರೆ ಭೂಮಿ ನೀಡಿದ ಸಿಎಂ, ವಿಮಾನದ ಇಂಧನಕ್ಕೆ ಇದ್ದ 29% ತೆರಿಗೆಯನ್ನು 4% ಕ್ಕೆ ಇಳಿಸಿದರು ಎಂದು ಹೇಳಿದರು.