ಮೈಸೂರು:ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಯಾಗುತ್ತಿದ್ದಂತೆ ನಗರದ ಅಂಬಾವಿಲಾಸ ಅರಮನೆಯಲ್ಲಿ ಧಾರ್ಮಿಕ ಪೂಜಾ ಕೈಂಕರ್ಯ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ಗೆ ಚಾಲನೆ ನೀಡಲಾಗಿದೆ.
ಅಂಬಾವಿಲಾಸ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಖಾಸಗಿ ದರ್ಬಾರ್ - ವಿಕ್ರಮಾದಿತ್ಯ ಸಿಂಹಾಸನ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಯಾಗುತ್ತಿದ್ದಂತೆ ನಗರದ ಅಂಬಾವಿಲಾಸ ಅರಮನೆಯಲ್ಲಿ ಧಾರ್ಮಿಕ ಪೂಜಾ ಕೈಂಕರ್ಯ ಹಾಗೂ ರಾಜವಂಶಸ್ಥರ ಖಾಸಗಿ ದರ್ಬಾರ್ಗೆ ಚಾಲನೆ ನೀಡಲಾಗಿದೆ.
![ಅಂಬಾವಿಲಾಸ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಖಾಸಗಿ ದರ್ಬಾರ್](https://etvbharatimages.akamaized.net/etvbharat/prod-images/768-512-4591491-thumbnail-3x2-sanju.jpg)
ಮೈಸೂರು ದಸರಾ ಮಹೋತ್ಸವ
ರಾಜವಂಶಸ್ಥ ಯದುವೀರ್ ಅವರಿಂದ ಖಾಸಗಿ ದರ್ಬಾರ್
ಯದುವೀರ್ ಒಡಯರ್ ಸಿಂಹಾಸವೇರುತ್ತಿದ್ದಂತೆ ಜೈಕಾರಗಳು ಮೊಳಗಿದ್ವು. ಈ ವೇಳೆ ನಾಡಿನಲ್ಲಿ ಸಮೃದ್ಧ ಮಳೆ, ಬೆಳೆಯನ್ನು ತಾಯಿ ಚಾಮುಂಡೇಶ್ವರಿ ಕರುಣಿಸಲೆಂದು ಅವರು ಪ್ರಾರ್ಥಿಸಿದ್ರು.
ರಾಜವಂಶಸ್ಥರು ಅರಮನೆಯ ತಮ್ಮ ಖಾಸಗಿ ನಿವಾಸದಲ್ಲಿ ದರ್ಬಾರ್ ನಡೆಸುವ ಪದ್ದತಿ ಶತಮಾನಗಳಿಂದ ನಡೆದುಕೊಂಡು ಬರುತ್ತಿದೆ.