ಕರ್ನಾಟಕ

karnataka

By

Published : Sep 16, 2021, 9:03 AM IST

ETV Bharat / state

ಹುಚ್ಚಗಣಿ ಗ್ರಾಮದಲ್ಲಿ ಗಲಾಟೆ ಪ್ರಕರಣ: ಘಟನಾ ಸ್ಥಳಕ್ಕೆ SP ಭೇಟಿ

ಮಹಾದೇವಮ್ಮ ದೇಗುಲ ನಿರ್ವಹಣೆಗೆ‌ ಕಮಿಟಿ ರಚಿಸುವ ವಿಚಾರದಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ಮಧ್ಯೆ ವೈರತ್ವ ಆರಂಭವಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಭೇಟಿ ನೀಡಿ ನಿರ್ಗಮಿಸಿದ ಬಳಿಕ‌ ಈ ಘಟನೆ ನಡೆದಿತ್ತು.

mysuru-sp-visits-hucchagani-village-for-inspection
ಹುಚ್ಚಗಣಿ ಗ್ರಾಮದಲ್ಲಿ ಗಲಾಟೆ ಪ್ರಕರಣ

ಮೈಸೂರು: ನಂಜನಗೂಡು ತಾಲೂಕಿನ ಹುಚ್ಚಗಣಿ ಗ್ರಾಮದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಹಿನ್ನೆಲೆ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಆರ್.ಚೇತನ್ ಭೇಟಿ ನೀಡಿದ್ದಾರೆ.

ಘಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ವರಿಷ್ಠಾಧಿಕಾರಿ, 2 ಗುಂಪುಗಳ ನಡುವೆ ಜಗಳ ನಡೆದು ಉದಯರವಿ ಎಂಬಾತನಿಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಈ ಹಿಂದೆ ಕೂಡ ಗಲಾಟೆಯಾಗಿತ್ತು ಎಂಬ ಮಾಹಿತಿ ಇದೆ. ಈ ಘಟನೆಯ ಬಗ್ಗೆ ತನಿಖೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಹುಚ್ಚಗಣಿ ಗ್ರಾಮಕ್ಕೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಭೇಟಿ

ಏನಿದು ಗಲಾಟೆ

ಗ್ರಾಮದ ಮಹದೇವಮ್ಮ ದೇವಸ್ಥಾನ ನಿರ್ವಹಣೆ ಸಮಿತಿ ರಚನೆ ಮಾಡುವ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತ ರವಿ,‌ ಬಿಜೆಪಿ‌ ಕಾರ್ಯಕರ್ತ ಉದಯರವಿ ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ ಮಾಡಿದ್ದರಿಂದ, ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಶಾಂತಗೊಳಿಸಿದ್ದಾರೆ.

ಇದನ್ನೂ ಓದಿ:ದೇವಾಲಯ ತೆರವು ವಿವಾದ : ಹುಚ್ಚಗಣಿ ಗ್ರಾಮದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾರಾಮಾರಿ

ABOUT THE AUTHOR

...view details