ಕರ್ನಾಟಕ

karnataka

ETV Bharat / state

ಕೊರೊನಾ ಎಫೆಕ್ಟ್: ನಂಜನಗೂಡು ಪಂಚ ಮಹಾರಥೋತ್ಸವ ಜಾತ್ರೆ ರದ್ದು - ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ

ಕೆಲ ದಿನಗಳಿಂದ ನೆರೆಯ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಮಾರ್ಚ್​ನಲ್ಲಿ ನಡೆಯಬೇಕಿದ್ದ ನಂಜನಗೂಡಿನ ಪಂಚ ಮಹಾರಥೋತ್ಸವ ಜಾತ್ರೆಯನ್ನು ರದ್ದು ಮಾಡಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

ನಂಜನಗೂಡಿನ ಪಂಚ ಮಹಾರಥೋತ್ಸವ ಜಾತ್ರೆ ರದ್ದು
Nanjangud Fair canceled due to Covid in Mysore

By

Published : Mar 17, 2021, 12:35 PM IST

ಮೈಸೂರು: ದಿನೇ ದಿನೇ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಂಜನಗೂಡಿನ ಪಂಚ ಮಹಾರಥೋತ್ಸವ ಜಾತ್ರೆಯನ್ನು ರದ್ದು ಮಾಡಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

ಕೊರೊನಾ ಆತಂಕದಿಂದ ನಂಜನಗೂಡಿನ ಪಂಚ ಮಹಾರಥೋತ್ಸವ ಜಾತ್ರೆ ರದ್ದು

ನಂಜನಗೂಡು ತಾಲೂಕಿನ ನಂಜುಂಡೇಶ್ವರ ದೇವಸ್ಥಾನದಲ್ಲಿ ಮಾ.19ರಿಂದ 30ರವರೆಗೆ ಜಾತ್ರಾ ಮಹೋತ್ಸವ ಹಾಗೂ ಮಾ‌.26ರಂದು ಪಂಚ ಮಹಾರಥೋತ್ಸವಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಸಾಂಪ್ರದಾಯಿಕವಾಗಿ ಚಿಕ್ಕ ತೇರನ್ನು ಎಳೆಯಲು ಅನುಮತಿ ನೀಡಿದೆ. ಷರತ್ತಿಗೊಳಪಡಿಸಿ ಸಾಂಕೇತಿಕ ರಥೋತ್ಸವಕ್ಕೆ ಸಮ್ಮತಿ ನೀಡಿರುವ ಜಿಲ್ಲಾಡಳಿತ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಡ್ಡಾಯಗೊಳಿಸಿದೆ.

ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದ ಪ್ರತಿ

ಓದಿ: ಕೊರೊನಾ ಎರಡನೇ ಅಲೆ ಭೀತಿ: ಇಂದು ಪ್ರಧಾನಿ ಜೊತೆ ಸಿಎಂ ವಿಡಿಯೋ ಸಂವಾದ

ಶಿಷ್ಟಾಚಾರದ ಪ್ರಕಾರ ಗಣ್ಯರು, ಅಧಿಕಾರಿಗಳು, ಸ್ಥಳಿಯರಿಗೆ ಮಾತ್ರ ಉಪಸ್ಥಿತಿಗೆ ಅವಕಾಶ ಸಿಗಲಿದ್ದು, ಹೊರ ರಾಜ್ಯ, ಹೊರ ಜಿಲ್ಲೆ ಹಾಗೂ ಹೊರ ತಾಲೂಕಿನ ಭಕ್ತಾದಿಗಳಿಗೆ ನಿರ್ಬಂಧ ವಿಧಿಸಲಾಗಿದೆ. ಕೊರೊನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಪಂಚ ರಥಮಹೋತ್ಸವವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ABOUT THE AUTHOR

...view details