ಕರ್ನಾಟಕ

karnataka

ETV Bharat / state

ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೇ ದಸರಾ ಮಾಡಿದ್ದಾರೆ: ಹೆಚ್.ವಿಶ್ವನಾಥ್ ಆರೋಪ

ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲ ಮೈಸೂರಿನವರು ಉಸ್ತುವಾರಿ ಆಗಿರಲ್ಲ. ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೇ ದಸರಾವನ್ನು ಆಚರಣೆ ಮಾಡಿದ್ದಾರೆ. ಇದೊಂದು ಅಧ್ವಾನ ದಸರಾ ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಸರ್ಕಾರವನ್ನು ಟೀಕಿಸಿದ್ದಾರೆ.

By

Published : Oct 8, 2022, 6:58 PM IST

no-one-is-taken-for-consideration-for-this-dasara-says-h-vishwanath
ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೇ ದಸರಾ ಮಾಡಿದ್ದಾರೆ: ಹೆಚ್.ವಿಶ್ವನಾಥ್

ಮೈಸೂರು : ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೇ ದಸರಾ ಆಚರಣೆ ಮಾಡಿದ್ದಾರೆ. ಇದೊಂದು ಅಧ್ವಾನ ದಸರಾ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅವರು ಸ್ವಪಕ್ಷೀಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಜಲದರ್ಶಿನಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಮೈಸೂರಿನವರು ಉಸ್ತುವಾರಿ ಆಗಿರಲ್ಲ. ಮೈಸೂರು ನಗರದ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ದಸರಾ ನಡೆಸಿದ್ದಾರೆ. ಈಗಿನ ಉಸ್ತುವಾರಿ ಸಚಿವರಿಗೆ ಪಾಪ ಅನುಭವ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೇ ದಸರಾ ಆಚರಣೆ : ಮೈಸೂರಿನವರೇ ಜಿಲ್ಲಾ ಮಂತ್ರಿ ಆಗಬೇಕಿತ್ತು. ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೇ ದಸರಾ ನಡೆಸಿದ್ದಾರೆ. ಅದ್ದೂರಿ ದಸರಾ ನಿಜ, ಆದರೆ ಸಾಕಷ್ಟು ಕಾರ್ಯಕ್ರಮಗಳಲ್ಲಿ ಸ್ಥಳೀಯರಿಗೆ ಅವಕಾಶ ಕೊಟ್ಟಿಲ್ಲ. ಟಾರ್ಚ್ ಲೈಟ್ ಪರೇಡ್ ಸ್ವಲ್ಪವೂ ಚೆನ್ನಾಗಿಲ್ಲ. ಟಾರ್ಚ್ ಲೈಟ್ ಪರೇಡ್‌ನಲ್ಲಿ ಮೋಟರ್ ಸೈಕಲ್ ರೈಡ್ ಮುಖ್ಯವಾಗಿರುತ್ತದೆ. ಅದನ್ನು ನೋಡಲು ಜನರು ಬರುತ್ತಾರೆ. ಆದರೆ, ಮೋಟರ್ ಸೈಕಲ್ ರೈಡ್ ಈ ಬಾರಿ ಆಕರ್ಷಣೆಯಾಗಿ ಇರಲಿಲ್ಲ. ಮೋಟರ್​ ಸೈಕಲ್ ರೈಡ್‌ಗೆ ಹಿಂದಿನ ಬಾಕಿ ಹಣವನ್ನೇ ಕೊಟ್ಟಿಲ್ವಂತೆ ಎಂದು ಹೇಳಿದರು.

ದಸರಾ ಆಚರಣೆಗೆ ಪ್ರಾಧಿಕಾರ ಮಾಡಬೇಕು : ಜಂಬೂ ಸವಾರಿ ಸುತ್ತಲೂ ಹೆಚ್ಚಿನ ಪ್ರಮಾಣದಲ್ಲಿ ಜನರು ಸೇರಿದ್ದರು. ದೇವರ ಕೃಪೆ ಯಾವುದೇ ಅಪಾಯ ಉಂಟಾಗಿಲ್ಲ. ಪೋಲಿಸ್ ರವರು ನಿಯಂತ್ರಣ ಮಾಡಬೇಕಿತ್ತು. ಆದರೆ, ಪೊಲೀಸರೇ ಫೋಟೋ ತೆಗೆದುಕೊಳ್ಳಲು ನಿಂತಿದ್ದರು ಎಂದು ಹೇಳಿದರು. ಇನ್ನು ದಸರಾವನ್ನು ಸಾಂಪ್ರದಾಯಿಕ ಹಾಗೂ ಅದ್ಧೂರಿಯಾಗಿ ಮಾಡಲು ದಸರಾ ಪ್ರಾಧಿಕಾರ ಕಡ್ಡಾಯವಾಗಿ ಮಾಡಲೇಬೇಕು. ಇದರಿಂದ ದಸರಾ ಮಾಡಲು ಯೋಜನೆಗಳನ್ನು ರೂಪಿಸಲು ಅನುಕೂಲವಾಗಲಿದೆ ಎಂದು ಹೇಳಿದರು.

ಮೀಸಲಾತಿ ಬಗ್ಗೆ ಸಭೆ ನಡೆಸಿ ಕಾನೂನು ರೂಪಿಸಬೇಕು : ಇನ್ನು ಮೀಸಲಾತಿ ಬಗ್ಗೆ ಮಾತನಾಡಿದ ಅವರು, ಎಸ್​​​ಸಿ, ಎಸ್​​​ಟಿ ಸಮುದಾಯಕ್ಕೆ ಮೀಸಲಾತಿಯಲ್ಲಿ ಹೆಚ್ಚಳ ಮಾಡಲಾಗುತ್ತಿದೆ. ಈ ಬಗ್ಗೆ ವಿಧಾನಸಭೆಯಲ್ಲಿ ವಿಸ್ತೃತ ರೂಪದಲ್ಲಿ ಚರ್ಚೆ ನಡೆಸಿ, ಕಾನೂನು ರೂಪಿಸಬೇಕು. ಕೆಲವೊಂದು ರಾಜ್ಯಗಳಲ್ಲಿ ಸರ್ಕಾರ ಕೊಟ್ಟಿರುವ ಮೀಸಲಾತಿಯನ್ನು ಸುಪ್ರೀಂಕೋರ್ಟ್ ರದ್ದು ಪಡಿಸಿರುವ ಉದಾಹರಣೆ ಇದೆ ಎಂದು ಹೇಳಿದರು.

ಮಲ ಹೊರುವವನು ಎಸ್​​ಸಿ ಆದರೆ, ಮಲ ತೊಳೆಯುವ ಮಡಿವಾಳ ಸಮುದಾಯ ಎಲ್ಲಿ ಇಟ್ಟಿದ್ದಿರಿ?. ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಪಡೆಯಲು ಹೋರಾಟ ಮಾಡ್ತಾ ಇದೆ. ಹೋರಾಟ ಅವರವರ ಹಕ್ಕು, ಮಠ ಹಾಗೂ ಮಾಧ್ಯಮ ಸರ್ಕಾರದ ಮಾಲೀಕರು. ಮಠದಲ್ಲಿ ಯಾರು ಮುಖ್ಯಮಂತ್ರಿ ಆಗಬೇಕು ಎಂದು ತೀರ್ಮಾನ ಮಾಡ್ತಾರೆ ಎಂದು ತಿಳಿಸಿದರು.

ಟಿಪ್ಪು ಸುಲ್ತಾನ್​ ಎಕ್ಸ್​​​​​ಪ್ರೆಸ್​​ ಹೆಸರು ಬದಲಾವಣೆ ಸರಿಯಲ್ಲ: ಟಿಪ್ಪು ಸುಲ್ತಾನ್ ಎಕ್ಸ್​​​​​​ಪ್ರೆಸ್​ ​ ಹೆಸರು ಬದಲಾವಣೆಗೆ ವಿಚಾರವಾಗಿ ಮಾತನಾಡಿದ ಅವರು, ಒಡೆಯರ್ ಬಗ್ಗೆ ಅಪಾರ ಗೌರವ ಇದೆ. ಹೊಸ ರೈಲು ತಂದು ಅದಕ್ಕೆ ಹೆಸರಿಡಬೇಕಿತ್ತು. ಇದ್ದ ಹೆಸರು ಬದಲಾವಣೆ ಸರಿಯಲ್ಲ. ಟಿಪ್ಪು ಸುಲ್ತಾನ್ ಹೆಸರು ಬದಲಾವಣೆ ಮಾಡಿದರೂ. ಮನಸ್ಸಿನಿಂದ ತೆಗೆದುಹಾಕಲು ಸಾಧ್ಯವಿಲ್ಲ. ಮೈಸೂರು ಮಹಾರಾಜರು ಅಜರಾಮರ, ಅದರಂತೆ ಟಿಪ್ಪು ಕೂಡ ನಮ್ಮ ಮನಸ್ಸಿನಲ್ಲಿದ್ದಾನೆ. ಅದನ್ನು ಯಾವ ಸರ್ಕಾರ ಬಂದರೂ ತೆಗೆದು ಹಾಕಲು ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ :ಶೃಂಗೇರಿಯಲ್ಲಿ ಟಿಪ್ಪು ಸಲಾಂ ಆರತಿ ರದ್ಧತಿಗೆ ಮನವಿ ಬಂದರೆ ಪರಿಶೀಲನೆ: ಸಚಿವ ಅಶೋಕ್ ‌

ABOUT THE AUTHOR

...view details