ಕರ್ನಾಟಕ

karnataka

ETV Bharat / state

ಜಾನುವಾರುಗಳಿಗೆ ನೀರು ಕುಡಿಸಲು ಕೆರೆಗೆ ಹೋದ ವೃದ್ಧೆ ನೀರು ಪಾಲು - ಮೈಸೂರಿನಲ್ಲಿ ವೃದ್ಧೆ ನೀರು ಪಾಲು

ವೃದ್ದೆಯೊಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.

Old  Woman drown in lake
ಪಾರ್ವತಮ್ಮ-ಕೆರೆಯಲ್ಲಿ ಮುಳುಗಿ ಮೃತಪಟ್ಟ ವೃದ್ಧೆ

By

Published : Mar 6, 2022, 6:58 AM IST

ಮೈಸೂರು:ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ವೃದ್ಧೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೆ.ಆರ್.ನಗರ ತಾಲೂಕಿನ ಹರಂಬಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಪಾರ್ವತಮ್ಮ(85) ಮೃತಪಟ್ಟವರು. ಇವರು ಶನಿವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ತಮ್ಮ ಮನೆಯ ಜಾನುವಾರುಗಳನ್ನು ಸಮೀಪದ ಕೆರೆಗೆ ನೀರು ಕುಡಿಸಲು ತೆರಳಿದ್ದರು. ಈ ವೇಳೆ ಜಾನುವಾರುಗಳನ್ನು ನೀರಿನೊಳಗೆ ಎಳೆದುಕೊಂಡು ಹೋದಾಗ ದುರ್ಘಟನೆ ಸಂಭವಿಸಿದೆ. ಗ್ರಾಮಸ್ಥರೊಬ್ಬರು ಕಾಪಾಡಲು ಮುಂದಾಗಿದ್ದಾರೆ. ಆದರೆ ನೀರಿನಲ್ಲಿ ಸಂಪೂರ್ಣವಾಗಿ ಮುಳುಗಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಮೃತರಿಗೆ ಮೂವರು ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಮಗ ರೇವಣ್ಣ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ:ಗುತ್ತಿಗೆದಾರನಿಂದ 1 ಲಕ್ಷ ಲಂಚ ಪಡೆಯುತ್ತಿದ್ದ ಇಬ್ಬರು ಎಂಜಿನಿಯರ್ಸ್​ ಎಸಿಬಿ ಬಲೆಗೆ

ABOUT THE AUTHOR

...view details