ಕರ್ನಾಟಕ

karnataka

ETV Bharat / state

ಜೂನ್​ ಅಂತ್ಯದೊಳಗೆ ರಾಜ್ಯದಲ್ಲಿ ಸಾವಿರ ವಿದ್ಯುತ್ ಚಾರ್ಜಿಂಗ್ ಸೆಂಟರ್: ಸಚಿವ‌ ವಿ.ಸುನೀಲ್ ಕುಮಾರ್ - ಜೂನ್​ ಅಂತ್ಯದೊಳಗೆ ವಿದ್ಯುತ್ ಚಾರ್ಜಿಂಗ್ ಸೆಂಟರ್

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾರ್ಬನ್ ಕಡಿಮೆ ಮಾಡಬೇಕೆಂಬ ಉದ್ದೇಶ ಹೊಂದಿದ್ದಾರೆ. ವಾಯು ಮಾಲಿನ್ಯ ನಿವಾರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಎಲೆಕ್ಷ್ರಿಕ್ ವಾಹನಗಳಿಗೆ ಉತ್ತೇಜನ ನೀಡಲಾಗುವುದು ಎಂದು ಸಚಿವ‌ ವಿ.ಸುನೀಲ್ ಕುಮಾರ್ ತಿಳಿಸಿದರು.

Energy Minister Sunil Kumar
ಇಂಧನ ಸಚಿವ‌ ವಿ.ಸುನೀಲ್ ಕುಮಾರ್

By

Published : May 7, 2022, 7:33 PM IST

ಮೈಸೂರು: ಜೂನ್​ತಿಂಗಳಲ್ಲಿ ಇಡೀ ರಾಜ್ಯಾದ್ಯಂತ ವಿದ್ಯುತ್ ಚಾಲೆಂಜ್ ಸೆಂಟರ್​ಗಳ ಅಭಿಯಾನ ಪ್ರಾರಂಭಿಸಿ, ಅದೇ ತಿಂಗಳ 30ರೊಳಗಾಗಿ ಒಂದು ಸಾವಿರ ವಿದ್ಯುತ್ ಚಾರ್ಜಿಂಗ್ ಸೆಂಟರ್ ಆರಂಭ ಮಾಡಲಿದ್ದೇವೆ ಎಂದು ಇಂಧನ ಸಚಿವ‌ ವಿ.ಸುನೀಲ್ ಕುಮಾರ್ ತಿಳಿಸಿದರು.

ಇಲ್ಲಿನ ಕಡಕೋಳದ ಕೆಇಬಿಇಎ ತರಬೇತಿ ಕೇಂದ್ರದಲ್ಲಿ ವಿದ್ಯುತ್ ಚಾಲಿತ ವಾಹನಗಳು ಮತ್ತು ಅದರ ಚಾರ್ಜಿಂಗ್ ತಂತ್ರಜ್ಞಾನಗಳ ಕುರಿತು ವಿಚಾರ ಸಂಕೀರ್ಣ ಹಾಗೂ ನೂತನವಾಗಿ ನಿರ್ಮಿಸಲಾಗಿರುವ ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ವಾಯು ಮಾಲಿನ್ಯ ನಿವಾರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಎಲೆಕ್ಷ್ರಿಕ್ ವಾಹನಗಳಿಗೆ ಉತ್ತೇಜನ ನೀಡಲಾಗುವುದು ಎಂದರು.

ಇಂಧನ ಸಚಿವ‌ ವಿ.ಸುನೀಲ್ ಕುಮಾರ್

ಎಲೆಕ್ಟಿಕಲ್ ವಾಹನಗಳ ಚಾರ್ಜಿಂಗ್ ಸ್ಟೆಷನ್ ಆರಂಭಿಸಲು ಸರ್ಕಾರದಿಂದ ಸಬ್ಸಿಡಿ ನೀಡಲಾಗುವುದು. ಕೇಂದ್ರ ಸರ್ಕಾರ ಸಹ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಮೇಲೆ ಮಾತ್ರವಲ್ಲದೇ ಚಾರ್ಜಿಂಗ್ ಸ್ಟೇಷನ್‌ಗಳ ನಿರ್ಮಾಣದ ಮೇಲೂ ಆಕರ್ಷಕ ಸಬ್ಸಿಡಿಗಳನ್ನು ನೀಡುತ್ತಿದೆ. ರಾಜ್ಯದಲ್ಲಿ ಈಗಾಗಲೇ ಹೆಚ್ಚು ಸ್ಟೇಷನ್ ನಿರ್ಮಿಸಲು ಸಭೆಗಳನ್ನು ಮಾಡಿದ್ದೇವೆ ಎಂದರು.

ಎಲ್ಲ ಜಿಲ್ಲಾ ಕೇಂದ್ರ, ರಾಷ್ಟ್ರೀಯ, ರಾಜ್ಯ ಹೆದ್ದಾರಿ, ಪ್ರವಾಸಿ ತಾಣಗಳಲ್ಲಿ ಚಾರ್ಜಿಂಗ್ ಸ್ಟೇಷನ್ ಮಾಡುವ ಬಗ್ಗೆ ನಿರ್ಧರಿಸಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಎಲೆಕ್ಟ್ರಿಕ್ ವಾಹನ ಉಪಯೋಗ ಮಾಡುವ ಕುರಿತೂ ಚಿಂತಿಸಲಾಗಿದೆ. ರಾಜ್ಯದ ಎಲ್ಲ ಭಾಗಗಳಲ್ಲಿ ಕೂಡ ವಿದ್ಯುತ್ ಚಾರ್ಜಿಂಗ್ ಸೆಂಟರ್​​ಗಳನ್ನು ಪ್ರಾರಂಭ ಮಾಡಬೇಕು ಎಂಬ ನಿಟ್ಟಿನಲ್ಲಿ ದೊಡ್ಡಪ್ರಮಾಣದಲ್ಲಿ ಪೂರ್ವ ತಯಾರಿ ನಡೆಸುತ್ತೇವೆ ಎಂದರು.

ನವೀಕರಿಸಬಹುದಾದ ಇಂಧನ ನೀತಿ 5 ವರ್ಷಗಳಿಗೆ ಘೋಷಣೆ ಆಗಿದೆ. 30 ಸಾವಿರ ಮೆಗಾವ್ಯಾಟ್​ ವಿದ್ಯುತ್ ಉತ್ಪಾದ‌ನೆ ಗುರಿ ಹೊಂದಲಾಗಿದೆ. ಎಲ್ಲರೂ ವಿದ್ಯುತ್ ಚಾಲಿತ ವಾಹನ ಬಳಸಬೇಕು. ಕಂಪನಿಗಳು ಅಗ್ಗದ ದರಕ್ಕೆ ಕೊಡುವಂತೆ ಆಗಬೇಕು. ನವೀಕರಿಸಬಹುದಾದ ಇಂಧನದಲ್ಲಿ ಬೇರೆ ರಾಜ್ಯಗಳಿಂತ ರಾಜ್ಯ ಮುಂದೆ ಇದೆ ಎಂದು ಹೇಳಿದರು.

ಇದನ್ನೂ ಓದಿ:ಸ್ಟಾಕ್ ಮಾರ್ಕೆಟ್ ಪ್ರಾಫಿಟ್ ಹೆಸರಲ್ಲಿ ವಂಚನೆ: ಬಳ್ಳಾರಿ ಮೂಲದ ಮೂವರ ಬಂಧನ

ABOUT THE AUTHOR

...view details