ಮೈಸೂರು: ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದಷ್ಟೇ ನಿಧನರಾಗಿದ್ದು, ದೇಶಾದ್ಯಂತ ಜರುಗಿದ ಅಭಿವೃದ್ಧಿ ಕೆಲಸಗಳಲ್ಲಿ ಇವರ ಹೆಸರು ಮುಂಚೂಣಿಯಲ್ಲಿತ್ತು.
ಮೈಸೂರು ವಿವಿ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿದ್ದ ಪ್ರಣಬ್ ಮುಖರ್ಜಿ - pranab mukharji is no more
ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ 2015 ರ ಜುಲೈ 27ರ ನಡೆದ ಮೈಸೂರು ಶತಮಾನೋತ್ಸವವನ್ನು ಪ್ರಣಬ್ ಮುಖರ್ಜಿ ಉದ್ಘಾಟಿಸಿದ್ದರು.

ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿದ್ದ ಪ್ರಣಬ್ ಮುಖರ್ಜಿ
ರಾಷ್ಟ್ರಪತಿ ಆಗಿದ್ದ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿದ್ದರು. ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ 2015 ರ ಜುಲೈ 27ರ ನಡೆದ ಮೈಸೂರು ಶತಮಾನೋತ್ಸವವನ್ನು ಉದ್ಘಾಟಿಸಿ, ಮೈಸೂರು ಪಾರಂಪರೆ ಹಾಗೂ ರಾಜರ ಬಗ್ಗೆ ಗುಣಗಾನ ಮಾಡಿದ್ದರು.
ಅಂದು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು, ವಿ.ಶ್ರೀನಿವಾಸ್ ಪ್ರಸಾದ್ ಜಿಲ್ಲಾ ಉಸ್ತುವಾರಿ ಸಚಿವ ಆಗಿದ್ದರು.