ಮೈಸೂರು: 4 ದಿನಗಳಿಂದ ನಡೆಯುತ್ತಿರುವ ಧರಣಿ ಸ್ಥಳಕ್ಕೆ ನಾಳೆ ಉಸ್ತುವಾರಿ ಸಚಿವರು ಬಂದು ಸಮಸ್ಯೆ ಆಲಿಸದಿದ್ದರೆ ಕೆ.ಡಿ.ಪಿ ಸಭೆಗೆ ಅಡ್ಡಿ ಪಡಿಸುವುದಾಗಿ ರಾಜ್ಯ ರೈತ ಸಂಘ ಎಚ್ಚರಿಕೆ ನೀಡಿದೆ.
ಕಳೆದ 4 ದಿನಗಳಿಂದ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ಕೈಗೊಂಡಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಬಡಲಗಪುರ ನಾಗೇಂದ್ರ ಧರಣಿ ಸ್ಥಳದಲ್ಲೇ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ಮನೆಗಳ ಮೇಲೆ ಪವರ್ ಗ್ರೀಡ್ ಮಾರ್ಗ ಹೋಗಿದ್ದು, ಇದನ್ನು ಬದಲಾಯಿಸುವಂತೆ ಹಲವಾರು ಬಾರಿ ಮನವಿ ಸಲ್ಲಿಸಿದ್ದು ಯಾವುದೇ ಪ್ರಯೋಜನ ಆಗಿಲ್ಲ. ಈ ಬಗ್ಗೆ ಯಾವುದೇ ಜನಪ್ರತಿನಿಧಿಗಳು ಕ್ರಮ ಕೈಗೊಂಡಿಲ್ಲ, ಇದನ್ನು ವಿರೋಧಿಸಿ ಕಳೆದ 4 ದಿನಗಳಿಂದಲೂ ಜಿಲ್ಲಾಧಿಕಾರಿಗಳ ಕಚೇರಿಯ ಹತ್ತಿರ ಅನಿರ್ದಿಷ್ಟಾವಧಿಯ ಧರಣಿ ನಡೆಸುತ್ತಿದ್ದರೂ ಕೂಡಾ ಯಾವುದೇ ಜನಪ್ರತಿನಿಧಿಗಳು ಆಗಮಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.