ಕರ್ನಾಟಕ

karnataka

ETV Bharat / state

ಶ್ರೀಗಂಧದ ವಸ್ತುಸಂಗ್ರಹಾಲಯ ಸ್ಥಳಾಂತರಕ್ಕೆ ಚಿಂತನೆ: ಸಚಿವ ಸೋಮಶೇಖರ್ - ಸಚಿವ ಎಸ್​ ಟಿ ಸೋಮಶೇಖರ್ ಹೇಳಿಕೆ

ಅರಮನೆ ಮೈದಾನ ಇಲ್ಲವೇ ಮೈಸೂರು ಮೃಗಾಲಯದಲ್ಲಿ ತೆರೆಯುವ ಬಗ್ಗೆ ಮಾತುಕತೆಗಳು ನಡೆಯುತ್ತಿವೆ. ಬೆಲೆ ಬಾಳುವ ವಸ್ತುಗಳು ಇರುವುದರಿಂದ ಸುರಕ್ಷತೆ ನೋಡಿಕೊಂಡು ಸೂಕ್ತ ಸ್ಥಳದಲ್ಲಿ ತೆರೆಯುವ ನಿರ್ಧಾರವನ್ನು ಅರಣ್ಯ ಇಲಾಖೆ ಮಾಡಲಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

sandalwood-museum-relocation-in-the-palace-or-zoo-premises
ಸಚಿವ ಎಸ್.ಟಿ.ಸೋಮಶೇಖರ್

By

Published : Jan 25, 2021, 1:12 PM IST

Updated : Jan 25, 2021, 4:30 PM IST

ಮೈಸೂರು: ಶ್ರೀಗಂಧದ ವಸ್ತುಸಂಗ್ರಹಾಲಯ ಸ್ಥಳಾಂತರದ ಚಿಂತನೆ ಇದ್ದು, ಅರಮನೆ ಮೈದಾನ ಇಲ್ಲವೇ ಮೈಸೂರು ಮೃಗಾಲಯದಲ್ಲಿ ತೆರೆಯುವ ಬಗ್ಗೆ ಮಾತುಕತೆಗಳು ನಡೆಯುತ್ತಿವೆ. ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ತೀರ್ಮಾನ ಕೈಗೊಳ್ಳಲಾಗುವುದು. ಸುಲಭವಾಗಿ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಸಚಿವ ಸೋಮಶೇಖರ್ ಹೇಳಿಕೆ

ಅಶೋಕಪುರಂನಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀಗಂಧದ ವಸ್ತು ಸಂಗ್ರಹಾಲಯವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಚಿವ ಸೋಮಶೇಖರ್, ಶ್ರೀಗಂಧದ ವಸ್ತು ಸಂಗ್ರಹಾಲಯವನ್ನು ಉದ್ಘಾಟಿಸಿರುವುದು ಸಂತಸದ ವಿಷಯ. ಕಳೆದ ಬಾರಿ ಭೇಟಿ ವೇಳೆ ಮೈಸೂರು ಅರಮನೆಯಲ್ಲಿ ವಸ್ತು ಸಂಗ್ರಹಾಲಯ ತೆರೆಯುವ ಉದ್ದೇಶ ಹೊಂದಿದ್ದಾಗಿ ತಿಳಿಸಿದ್ದೆ. ಆದರೆ, ಅಲ್ಲಿ ಸದ್ಯ ಕಟ್ಟಡದ ಕೊರತೆ ಇದ್ದಿದ್ದರಿಂದ ಅರಮನೆ ಮೈದಾನದ ಸಮಿತಿ ಅವರು ಕಟ್ಟಡವನ್ನು ಕಟ್ಟಿಕೊಡುವ ಬಗ್ಗೆ ಹೇಳಿದ್ದಾರೆ. ಇದೇ ವೇಳೆ, ಮೈಸೂರು ಮೃಗಾಲಯದಲ್ಲೂ ಸ್ಥಳಾವಕಾಶ ಇರುವ ಬಗ್ಗೆ ಮಾಹಿತಿ ಬಂದಿದ್ದರಿಂದ ಅಲ್ಲೂ ಸಹ ಮಾತುಕತೆ ನಡೆಸಲಾಗುತ್ತಿದೆ. ಬೆಲೆಬಾಳುವ ವಸ್ತುಗಳು ಇರುವುದರಿಂದ ಸುರಕ್ಷತೆಯನ್ನು ನೋಡಿಕೊಂಡು ಸೂಕ್ತ ಸ್ಥಳದಲ್ಲಿ ತೆರೆಯುವ ನಿರ್ಧಾರವನ್ನು ಅರಣ್ಯ ಇಲಾಖೆ ಮಾಡಲಿದೆ ಎಂದು ತಿಳಿಸಿದರು.

ಶ್ರೀಗಂಧಕ್ಕೆ ಸರ್ಕಾರದಿಂದ ಪ್ರೋತ್ಸಾಹ ಕೊಡಲಾಗುತ್ತಿದೆ. ಅಲ್ಲದೆ, ಖಾಸಗಿಯಾಗಿ ಬೆಳೆಸಲು ಸಹ ಉತ್ತೇಜನ ನೀಡಲಾಗುತ್ತಿದೆ. ಇದಕ್ಕೆ ಉತ್ತಮ ದರ ಇರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಬೇಕು. ಶ್ರೀಗಂಧದ ವಸ್ತು ಸಂಗ್ರಹಾಲಯವನ್ನು ಯಾರು ಬೇಕಿದ್ದರೂ ವೀಕ್ಷಣೆ ಮಾಡಬಹುದಾಗಿದ್ದು, ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ:1ನೇ ತರಗತಿಯಿಂದಲೂ ಶಾಲಾರಂಭಕ್ಕೆ ಒತ್ತಾಯ, ನಾಡಿದ್ದು ತೀರ್ಮಾನ: ಸಚಿವ ಸುರೇಶ್ ಕುಮಾರ್

ಶ್ರೀಗಂಧದ ಮ್ಯೂಸಿಎಂ ವೀಕ್ಷಣೆ:ಉದ್ಘಾಟನೆ ಬಳಿಕ ವಸ್ತು ಸಂಗ್ರಹಾಲಯದಲ್ಲಿರುವ ಶ್ರೀಗಂಧದ ವಿವಿಧ ತಳಿಗಳು, ಬೇರುಗಳು, ಕಾಂಡಗಳು, ಪ್ರಭೇದಗಳು, ಅವುಗಳ ಉಪಯೋಗಗಳು, ವರ್ಗೀಕರಣದ ವಿವರಗಳು ಸೇರಿದಂತೆ ಶ್ರೀಗಂಧದ ಮರದಲ್ಲಿ ಏನೆಲ್ಲ ಔಷಧೀಯ ಗುಣಗಳಿವೆ ಹಾಗೂ ಅದರಿಂದ ಎಷ್ಟು ಲಾಭ ಮಾಡಬಹುದು ಎಂಬ ಬಗ್ಗೆ ಸಚಿವ ಎಸ್.ಟಿ.ಸೋಮಶೇಖರ್ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಪ್ರಾತ್ಯಕ್ಷಿಕೆ ವೀಕ್ಷಣೆ : ಮ್ಯೂಸಿಯಂನಲ್ಲಿ ಪ್ರೊಜೆಕ್ಟರ್ ಮೂಲಕ ಪ್ರಾತ್ಯಕ್ಷಿಕೆ ವೀಕ್ಷಿಸಿದ ಸಚಿವರು, ಶ್ರೀಗಂಧದ ಬೆಳೆಯಿಂದ ರೈತರು ಹೇಗೆಲ್ಲ ಲಾಭಗಳಿಸಬಹುದು? ಒಂದು ಮರದಿಂದ ಎಷ್ಟು ಆದಾಯ ಲಭಿಸಲಿದೆ? ಶ್ರೀಗಂಧದ ಕೃಷಿ ಹೇಗೆ? ಎಂಬ ಅಂಶಗಳ ವಿವರಣೆಯನ್ನು ವೀಕ್ಷಿಸಿದರು. ರೈತರಿಗೆ ನಿಜಕ್ಕೂ ಇದು ಉಪಯುಕ್ತವಾಗಿದ್ದು, ಶ್ರೀಗಂಧದ ಮೂಲಕ ಲಾಭ ಪಡೆಯಬೇಕು ಎಂದು ಅಭಿಪ್ರಾಯಪಟ್ಟರು.

Last Updated : Jan 25, 2021, 4:30 PM IST

ABOUT THE AUTHOR

...view details