ಕರ್ನಾಟಕ

karnataka

By

Published : Mar 17, 2022, 1:32 PM IST

ETV Bharat / state

ಫಿಲ್ಮ್ ಸಿಟಿಗೆ ಪುನೀತ್ ರಾಜ್ ಕುಮಾರ್ ಹೆಸರಿಟ್ಟರೆ ಸಂತಸ: ಶಿವರಾಜ್ ಕುಮಾರ್

ಫಿಲ್ಮ್ ಸಿಟಿಗೆ ಪುನೀತ್ ರಾಜ್ ಕುಮಾರ್ ಹೆಸರಿಟ್ಟರೆ ಸಂತೋಷವಾಗುತ್ತದೆ. ಆದರೆ, ಕುಟುಂಬ ಸದಸ್ಯನಾಗಿ ನಾನು ಆ ರೀತಿ ಒತ್ತಾಯ ಮಾಡುವುದಿಲ್ಲ. ಚಿತ್ರರಂಗಕ್ಕೆ ದುಡಿದ ಸಾಕಷ್ಟು ಮಂದಿ ಇದ್ದಾರೆ. ಅವರ ಹೆಸರನ್ನ ಇಟ್ಟರೂ ಸಹ ಸಂತೋಷ ಎಂದು ಶಿವರಾಜ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಶಿವರಾಜ್ ಕುಮಾರ್
ಶಿವರಾಜ್ ಕುಮಾರ್

ಮೈಸೂರು: ರಾಜ್ಯ ಸರ್ಕಾರ ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಮಾಡಲು ಮುಂದಾಗಿದೆ. ಇದಕ್ಕೆ ಪುನೀತ್ ರಾಜ್ ಕುಮಾರ್ ಹೆಸರಿಟ್ಟರೆ ಸಂತಸವಾಗಲಿದೆ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂಬಂಧ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಫಿಲ್ಮ್ ಸಿಟಿಗೆ ಪುನೀತ್ ರಾಜ್ ಕುಮಾರ್ ಹೆಸರಿಟ್ಟರೆ ಸಂತೋಷವಾಗುತ್ತದೆ. ಆದರೆ, ಕುಟುಂಬ ಸದಸ್ಯನಾಗಿ ನಾನು ಆ ರೀತಿ ಒತ್ತಾಯ ಮಾಡುವುದಿಲ್ಲ. ಚಿತ್ರರಂಗಕ್ಕೆ ದುಡಿದ ಸಾಕಷ್ಟು ಮಂದಿ ಇದ್ದಾರೆ. ಅವರ ಹೆಸರನ್ನು ಸಹ ಇಡಬಹುದು. ಯಾರ ಹೆಸರಿಟ್ಟರೂ ಸಹ ಸಂತೋಷವಾಗುತ್ತದೆ. ಅಭಿಮಾನಿಗಳು ಅಭಿಮಾನದಿಂದ ಅಪ್ಪು ಹೆಸರಿಡುವಂತೆ ಒತ್ತಾಯಿಸುತ್ತಿದ್ದಾರೆ ಎಂದರು.

ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ನಟ ಶಿವರಾಜ್ ಕುಮಾರ್

ಅಪ್ಪು ಇಲ್ಲದ ಹುಟ್ಟುಹಬ್ಬ ಆಚರಣೆ ತುಂಬಾ ದುಃಖದ ವಿಚಾರ. ಜನ್ಮದಿನಕ್ಕೆ ಇಬ್ಬರೂ ಗಿಫ್ಟ್​ಗಳನ್ನ ಶೇರ್ ಮಾಡುತ್ತಿದ್ದೆವು. ಪುನೀತ್​ಗೆ ಬ್ರಾಂಡ್ ವಾಚ್ ,ಬೆಲ್ಟ್, ಗಾಗಲ್ ಸಾಕಷ್ಟು ಕೊಟ್ಟಿದ್ದೇನೆ. ಅವನು ಎಲ್ಲರ ಹೃದಯದಲ್ಲಿ ಇದ್ದಾನೆ‌. ಅವನಿಲ್ಲದ ವೇಳೆ ಜೇಮ್ಸ್​ ಸಿನಿಮಾ ಬಿಡುಗಡೆಯಾಗಿರುವುದು ಹೆಚ್ಚು ದುಃಖ ತರುತ್ತಿದೆ. ಡಬ್ಬಿಂಗ್ ಮಾಡುವಾಗ ನನಗೆ ತುಂಬಾ ನೋವಾಗುತ್ತಿತ್ತು ಎಂದು ತಿಳಿಸಿದರು.

ಇದನ್ನೂ ಓದಿ:ಬೆಳಗಾವಿ: ಪ್ರೀತಿಯ ಅಪ್ಪುಗಾಗಿ 17ನೇ ಸೀಟ್​ ಬುಕ್ ಮಾಡಿದ ಅಭಿಮಾನಿ

ABOUT THE AUTHOR

...view details