ಕರ್ನಾಟಕ

karnataka

By

Published : Nov 9, 2021, 10:08 PM IST

ETV Bharat / state

ಜಿಟಿಡಿ ಉಳಿಸಿಕೊಳ್ಳಲು ಹೆಚ್‌ಡಿಡಿ, ಹೆಚ್​ಡಿಕೆ ಯತ್ನ: ಸಿದ್ದರಾಮಯ್ಯ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಬಳಿಕ ಕ್ಷೇತ್ರಕ್ಕೆ ಬರೋದಕ್ಕೆ ತುಂಬಾ ಬೇಸರ ಆಗಿತ್ತು. ಹಲವು ದಿನಗಳ ಬಳಿಕ ನಾನು ಚಾಮುಂಡೇಶ್ವರಿ ಕ್ಷೇತ್ರದಕ್ಕೆ ಬಂದಿದ್ದೇನೆ. ಚುನಾವಣೆಯಲ್ಲಿ ನಾನು ಜಿ.ಟಿ.ದೇವೇಗೌಡ ಪರಸ್ಪರ ಎದುರಾಗಿದ್ದೆವು ಎಂದು ಸಿದ್ದರಾಮಯ್ಯ ಹೇಳಿದರು.

siddaramaiah-reaction-about-g-t-devegowda
ಸಿದ್ದರಾಮಯ್ಯ

ಮೈಸೂರು: ಶಾಸಕ ಜಿ.ಟಿ.ದೇವೇಗೌಡರಿಗೆ ಕಾಂಗ್ರೆಸ್‌ಗೆ ಬರೋದಿಕ್ಕೆ ಮನಸ್ಸು ಇದೆ. ಆದರೆ, ಹೆಚ್.ಡಿ.ದೇವೇಗೌಡ, ಕುಮಾರಸ್ವಾಮಿ ಅಲ್ಲಿಯೇ ಉಳಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕೇರ್ಗಳ್ಳಿ ಹೊಂಬಾಳಮ್ಮ ಸಿದ್ದರಾಮೇಶ್ವರ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಬಳಿಕ ಕ್ಷೇತ್ರಕ್ಕೆ ಬರೋದಕ್ಕೆ ತುಂಬಾ ಬೇಸರ ಆಗಿತ್ತು. ಹಲವು ದಿನಗಳ ಬಳಿಕ ನಾನು ಚಾಮುಂಡೇಶ್ವರಿ ಕ್ಷೇತ್ರದಕ್ಕೆ ಬಂದಿದ್ದೇನೆ. ಚುನಾವಣೆಯಲ್ಲಿ ನಾನು ಜಿ. ಟಿ ದೇವೇಗೌಡ ಪರಸ್ಪರ ಎದುರಾಗಿದ್ದೆವು. ಚುನಾವಣೆಯಲ್ಲಿ ನನ್ನನ್ನೇ ಸೋಲಿಸಿದ್ದ ಗಿರಾಕಿ ಆತ ಎಂದು ಹಾಸ್ಯ ಚಟಾಕಿ ಹಾರಿಸಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕೇರ್ಗಳ್ಳಿ ಹೊಂಬಾಳಮ್ಮ ಸಿದ್ದರಾಮೇಶ್ವರ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ

ಸೋತ ಬಳಿಕ ಇಬ್ಬರೂ ಒಂದೇ ವೇದಿಕೆಯಲ್ಲಿ ಕುಳಿತುಕೊಳ್ಳುವ ಬಗ್ಗೆ ಸಾಕಷ್ಟು ಕುತೂಹಲ ಇತ್ತು. ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತವನು, ಜಿಟಿ ಗೆದ್ದಿದ್ದಾರೆ. ಜನರು ಕರೆದ ಮೇಲೆ ಒಂದೇ ವೇದಿಕೆಗೆ ಬರಲೇ ಬೇಕಾಗಿದೆ ಎಂದರು.

ಜಿ.ಟಿ.ದೇವೇಗೌಡ ಕಾಂಗ್ರೆಸ್‌ಗೆ ಬಂದಿದ್ದಾನೆ ಅಂತಾ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ವರ್ಷಗಳ ಇತಿಹಾಸ ಇದೆ. ಪಕ್ಷದ ತತ್ವ, ಸಿದ್ದಾಂತ ಒಪ್ಪಿಕೊಂಡು ಬರೋದಿದ್ದರೆ ಬರಬಹುದು. ಯಾರೇ ಬಂದರು ಪಕ್ಷಕ್ಕೆ ಸ್ವಾಗತ ಎಂದು ಹೇಳಿದರು.

ABOUT THE AUTHOR

...view details