ಮೈಸೂರು:ಸಚಿವ ಜಿ.ಟಿ. ದೇವೇಗೌಡರ ಹೇಳಿಕೆ ನನ್ನಲ್ಲೂ ಅಚ್ಚರಿ ಮೂಡಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಸಚಿವ ಜಿ ಟಿ ದೇವೇಗೌಡರ ಹೇಳಿಕೆಗೆ ಟ್ವಿಟ್ಟರ್ ಮೂಲಕ ಸಿದ್ದರಾಮಯ್ಯ ಪ್ರತಿಕ್ರಿಯೆ - undefined
ಸಚಿವ ಜಿಟಿ ದೇವೇಗೌಡ ಚಾಮುಂಡೇಶ್ವರಿ ಕ್ಷೇತ್ರದ ಕೆಲವು ಗ್ರಾಮಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ನೀಡಿದ್ದಾರೆ ಎಂಬ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸಚಿವರ ಹೇಳಿಕೆ ನನ್ನಲ್ಲೂ ಸಹ ಅಚ್ಚರಿ ಮೂಡಿಸಿದೆ. ಜಿಟಿಡಿ ಮಾತು ಸುಳ್ಳಾಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
ಸಿದ್ದರಾಮಯ್ಯ
ಚಾಮುಂಡೇಶ್ವರಿ ಕ್ಷೇತ್ರದ ಕೆಲವು ಗ್ರಾಮಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ನೀಡಿದ್ದಾರೆ ಎಂದು ಬುಧವಾರ ಸಚಿವ ಜಿ ಟಿ ದೇವೇಗೌಡರು ಹೇಳಿಕೆ ನೀಡಿದ್ದರು. ಈ ಕುರಿತು ಟ್ವಿಟ್ಟರ್ನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು ಸಚಿವರ ಹೇಳಿಕೆ ನನ್ನಲ್ಲೂ ಅಚ್ಚರಿ ಮೂಡಿಸಿದೆ. ಜಿಟಿ ದೇವೇಗೌಡರ ಮಾತು ಸುಳ್ಳಾಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
ಮೇ ೨೩ ರ ಫಲಿತಾಂಶದಲ್ಲಿ ಈ ಹೇಳಿಕೆಯ ಸತ್ಯಾಂಶ ಗೊತ್ತಾಗಲಿದೆ. ಮಿಂಚಿ ಹೋದ ಕಾರ್ಯಕ್ಕೆ ಚಿಂತಿಸಿ ಫಲವಿಲ್ಲ. ಕಾದು ನೋಡೋಣವೆಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ.