ಕರ್ನಾಟಕ

karnataka

ETV Bharat / state

ಈಶ್ವರಪ್ಪ ಒಬ್ಬ ಕೊಲೆಗಡುಕ, ಬಂಧಿಸಿ ತನಿಖೆ ಮಾಡಿ : ಸಿದ್ದರಾಮಯ್ಯ ವಾಗ್ದಾಳಿ - ಕೆ ಎಸ್​ ಈಶ್ವರಪ್ಪ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಒಂದೇ ಒಂದು ಅಭಿವೃದ್ಧಿ ಕೆಲಸವನ್ನು ಮಾಡಿಲ್ಲ. 4 ವರ್ಷದಲ್ಲಿ ಬಡವರಿಗೆ ಒಂದು ಮನೆಯನ್ನೂ ನೀಡಿಲ್ಲ. ಬಿಜೆಪಿಯವರಿಗೆ ಧಮ್ ಇದ್ದರೆ ಒಂದೇ ವೇದಿಕೆಯಲ್ಲಿ ಬರಲಿ‌ ಚರ್ಚೆ ಮಾಡೋಣ ಎಂದು ಸವಾಲು ಹಾಕಿದರು. ಸರ್ಕಾರ ತನ್ನ ವೈಫಲ್ಯವನ್ನ ಮುಚ್ಚಿಡಲು ಕೋಮುವಾದವನ್ನ ಮುನ್ನೆಲೆಗೆ ತರುವ ಯತ್ನ ಮಾಡುತ್ತಿದೆ..

ಸಿದ್ದರಾಮಯ್ಯ
ಸಿದ್ದರಾಮಯ್ಯ

By

Published : Apr 20, 2022, 5:53 PM IST

ಮೈಸೂರು :ಈಶ್ವರಪ್ಪ ಒಬ್ಬ ಕೊಲೆಗಡುಕ, ಅವರನ್ನು ಅರೆಸ್ಟ್ ಮಾಡಿ ತನಿಖೆ ಮಾಡಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ. ಇಂದು ಈಶ್ವರಪ್ಪನನ್ನ ಬಂಧಿಸಿ ಎಂದು ಆಗ್ರಹಿಸಲು ಮೈಸೂರಿನ ಗಾಂಧಿ ವೃತ್ತದ ಬಳಿ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಆತನ ವಿರುದ್ಧ ಹಾಕಲಾಗಿರುವ ಎಫ್​ಐಆರ್​ನಲ್ಲಿ ಎಒನ್ ಆರೋಪಿಯಾಗಿದ್ದು, ಕೂಡಲೇ ಈಶ್ವರಪ್ಪ ಅವರನ್ನು ಬಂಧಿಸಿ ತನಿಖೆ ಮಾಡಬೇಕು. ಸಾಮಾನ್ಯ ಜನರ ವಿರುದ್ಧ ಎಫ್ಐಆರ್ ಆದರೆ ಅವರನ್ನು ಬಂಧಿಸಿ ತನಿಖೆ ನಡೆಸಲಾಗುತ್ತದೆ. ಅದೇ ರೀತಿ ಈಶ್ವರಪ್ಪನನ್ನ ಬಂಧಿಸಬೇಕೆಂದು ಆಗ್ರಹಿಸಿದರು.

ಈಶ್ವರಪ್ಪ ವಿರುದ್ದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಒಂದೇ ಒಂದು ಅಭಿವೃದ್ಧಿ ಕೆಲಸವನ್ನು ಮಾಡಿಲ್ಲ. 4 ವರ್ಷದಲ್ಲಿ ಬಡವರಿಗೆ ಒಂದು ಮನೆಯನ್ನೂ ನೀಡಿಲ್ಲ. ಬಿಜೆಪಿಯವರಿಗೆ ಧಮ್ ಇದ್ದರೆ ಒಂದೇ ವೇದಿಕೆಯಲ್ಲಿ ಬರಲಿ‌ ಚರ್ಚೆ ಮಾಡೋಣ ಎಂದು ಸವಾಲು ಹಾಕಿದರು. ಸರ್ಕಾರ ತನ್ನ ವೈಫಲ್ಯವನ್ನ ಮುಚ್ಚಿಡಲು ಕೋಮುವಾದವನ್ನ ಮುನ್ನೆಲೆಗೆ ತರುವ ಯತ್ನ ಮಾಡುತ್ತಿದೆ.

ರಾಜ್ಯದಲ್ಲಿ ಶಾಂತಿ ಕದಡುವ ಕೆಲಸದ ಜೊತೆಗೆ ಸಮಾಜ ಒಡೆಯುವ ಕೆಲಸವನ್ನು ಮಾಡುತ್ತಿದ್ದು, ಹಿಜಾಬ್, ಹಲಾಲ್ ಹಾಗೂ ವ್ಯಾಪಾರ ನಿರ್ಬಂಧ ಹೇರುವ ಕೆಲಸ ಮಾಡುತ್ತಿದೆ. ದೇಶ ಹಾಗೂ ರಾಜ್ಯಕ್ಕೆ ಅಶಾಂತಿ ಉಂಟು ಮಾಡುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಯಾರಾದರೊಬ್ಬ ಆರ್​ಎಸ್​ಎಸ್, ಜನಸಂಘ ಹಾಗೂ ಹಿಂದೂ ಮಹಾಸಭಾದ ವ್ಯಕ್ತಿಗಳು ಸ್ವಾತಂತ್ರಕ್ಕಾಗಿ ಪ್ರಾಣ ತ್ಯಾಗ ಮಾಡಿಲ್ಲ. ಆದರೆ, ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ಕಾಂಗ್ರೆಸ್ ಪಕ್ಷದವರು ಈ ದೇಶಕ್ಕೆ ಸ್ವತಂತ್ರ ತಂದು ಕೊಡಲು ಹೋರಾಟ ಮಾಡಿದ್ದಾರೆ. ಕಾಂಗ್ರೆಸ್ ರಕ್ತದಲ್ಲಿ ದೇಶಭಕ್ತಿ ಇದೆ. ಬಿಜೆಪಿಯವರಿಂದ ದೇಶ ಭಕ್ತಿ ಪಾಠ ಕಲಿಯಬೇಕಿಲ್ಲ ಎಂದರು.

ಹೆಚ್ಚು ಸ್ಥಾನ ಗೆಲ್ಲಿಸುವಂತೆ ಮನವಿ : ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ 15 ಸ್ಥಾನಗಳಿವೆ. ಅದರಲ್ಲಿ ಕನಿಷ್ಠ 13 ರಿಂದ 14 ಸ್ಥಾನವನ್ನ ಕಾಂಗ್ರೆಸ್ ಗೆಲ್ಲಿಸಲು ಶಪಥ ಮಾಡಿ ಆಗ ಮಾತ್ರ ಬಿಜೆಪಿಯನ್ನ ಕಿತ್ತೊಗೆಯಲು ಸಾಧ್ಯವಾಗುತ್ತದೆ. ಆ ಮೂಲಕ ಜನರನ್ನು ಉಳಿಸಬಹುದು ಎಂದು ಕರೆ ನೀಡಿದ ಸಿದ್ದರಾಮಯ್ಯ, ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿಗಳಿಗೆ ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿ ಮನವಿ ಪತ್ರ ನೀಡಲಾಯಿತು.

ಓದಿ:RSS, ಬಿಜೆಪಿಯನ್ನು ತೋಂಟದ ಸಿದ್ಧಲಿಂಗ ಶ್ರೀಗಳು ವಿರೋಧಿಸಿದ್ದು ಅರಿವಿಲ್ಲವೇ?.. ಸಿಎಂಗೆ ದಿಂಗಾಲೇಶ್ವರ ಶ್ರೀ ಪ್ರಶ್ನೆ

For All Latest Updates

TAGGED:

ABOUT THE AUTHOR

...view details