ಮೈಸೂರು : ನಿವೃತ್ತ ಅಡ್ವೋಕೆಟ್ ಜನರಲ್ ಪ್ರೊ. ರವಿವರ್ಮ ಕುಮಾರ್ ಅವರ ಪುತ್ರ ಸರಳವಾಗಿ ಮಂತ್ರ ಮಾಂಗಲ್ಯ ವಿವಾಹವಾಗುವ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.
ನಗರದ ದಟ್ಟಗಳ್ಳಿಯಲ್ಲಿರುವ ಸಾ.ರಾ.ಕನ್ವೆನ್ಷನ್ ಹಾಲ್ನಲ್ಲಿ ಮದುವೆ ನಿಶ್ಚಯವಾಗಿತ್ತು. ಆದರೆ ಕೊರೊನಾ ವೈರಸ್ ಭೀತಿ ಹಿನ್ನೆಲೆ, ಮದುವೆ ಮಂಟಪದಲ್ಲಿ ಜನ ಹೆಚ್ಚಾಗಿ ಸೋಂಕು ಹರಡಲು ಕಾರಣವಾಗಬಹುದು ಎಂದು ಮುನ್ನೆಚ್ಚರಿಕೆ ಕ್ರಮವಾಗಿ ಮನೆಯಲ್ಲಿಯೇ ಕೆಲವೇ ಮಂದಿ ಸಂಬಂಧಿಗಳ ಸಮ್ಮುಖದಲ್ಲಿ ವಿವಾಹ ನೆರವೇರಿಸಲಾಗಿದೆ.