ಕರ್ನಾಟಕ

karnataka

ಜಮೀರ್ ಮನೆ ಮೇಲಿನ ಇಡಿ ದಾಳಿ ಹಿಂದೆ ಡಿಕೆಶಿ ಕೈವಾಡ ಏಕಿರಬಾರದು?: ಎಸ್.ಟಿ.ಸೋಮಶೇಖರ್

By

Published : Aug 6, 2021, 1:19 PM IST

ಜಮೀರ್ ಅಹಮದ್ ಅವರು ಪದೇ ಪದೇ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳುತ್ತಿದ್ದರು. ಈ ವಿಚಾರವನ್ನು ಜೀರ್ಣಿಸಿಕೊಳ್ಳಲು ಆಗದೇ ಡಿ.ಕೆ.ಶಿವಕುಮಾರ್ ಅವರೇ ಜಮೀರ್ ಮನೆ ಮೇಲೆ ಇಡಿ ದಾಳಿ ಮಾಡಿಸಿರಬಹುದು ಎಂದು ಎಸ್.ಟಿ.ಸೋಮಶೇಖರ್ ಆರೋಪಿಸಿದರು.

ಎಸ್.ಟಿ.ಸೋಮಶೇಖರ್
ಎಸ್.ಟಿ.ಸೋಮಶೇಖರ್

ಮೈಸೂರು: ಜಾರಿ ನಿರ್ದೇಶನಾಲಯ (ಇಡಿ) ದಾಳಿಯ ಬಗ್ಗೆ ಡಿ.ಕೆ‌ ಶಿವಕುಮಾರ್ ಅವರಿಗೆ ಸಂಪೂರ್ಣವಾಗಿ ಗೊತ್ತಿದೆ. ಹೀಗಾಗಿ ಶಾಸಕ ಜಮೀರ್ ಅಹಮದ್ ಮನೆ ಮೇಲಿನ ನಡೆದ ದಾಳಿ ಹಿಂದೆ ಡಿ.ಕೆ.ಶಿವಕುಮಾರ್ ಅವರ ಕೈವಾಡ ಏಕೆ ಇರಬಾರದು? ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ ನೀಡಿದ್ದಾರೆ.

ಇಂದು ಸಂಸದ ಶ್ರೀನಿವಾಸ್ ಪ್ರಸಾದ್ ಮನೆಗೆ ಭೇಟಿ‌ ನೀಡಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಇಡಿ ದಾಳಿ ರಾಜಕೀಯ ಪ್ರೇರಿತ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು. ಜಮೀರ್ ಅಹಮದ್ ಅವರು ಪದೇ ಪದೇ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳುತ್ತಿದ್ದರು. ಈ ವಿಚಾರವನ್ನು ಜೀರ್ಣಿಸಿಕೊಳ್ಳಲು ಆಗದೇ ಡಿ.ಕೆ.ಶಿವಕುಮಾರ್ ಅವರೇ ಜಮೀರ್ ಮನೆ ಮೇಲೆ ಈ ದಾಳಿ ಮಾಡಿಸಿರಬಹುದು ಎಂದು ಆರೋಪಿಸಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್

ಇಡಿ ದಾಳಿಯ ಹಿಂದೆ ಬಿಜೆಪಿಯವರ ಕೈವಾಡವಿದೆ ಎಂದು ಆರೋಪ ಮಾಡುತ್ತಿರುವವರಿಗೆ ನಾವೂ ಸಹ ಡಿಕೆಶಿ ಮಾಡಿಸಿರಬಹುದು ಎಂದು ಹೇಳಬಹುದಲ್ಲ. ಐ.ಟಿ ಮತ್ತು ಇ.ಡಿ ಅಧಿಕಾರಿಗಳು ಅವರ ಕೆಲಸವನ್ನು ಮಾಡುತ್ತಿದ್ದಾರೆ. ನಮ್ಮ ವ್ಯವಹಾರ ಸರಿ ಇದ್ದಾಗ ಹೆದರುವ ಅವಶ್ಯಕತೆ ಏನಿದೆ ಎಂದರು.

ಬೆಂಗಳೂರು ಉಸ್ತುವಾರಿ ಬಗ್ಗೆ ಆಸೆ ವ್ಯಕ್ತಪಡಿಸಿದ ಸಚಿವ:

ನನಗೆ ಯಾವ ಖಾತೆಯನ್ನು ನೀಡಿದರೂ ಕೂಡ ನಿಭಾಯಿಸಲು‌ ಸಿದ್ಧನಿದ್ದೇನೆ. ಆದರೆ ಮುಂದಿನ‌ BBPM ಚುನಾವಣೆ ಹಿನ್ನೆಲೆಯಲ್ಲಿ ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಿ, ಬೆಂಗಳೂರು ಉಸ್ತುವಾರಿ ನೀಡಿದರೆ ಒಳ್ಳೆಯದು. ಆದರೆ ನಾನು ಇದೇ ಖಾತೆ ಬೇಕು ಎಂದು ಕೇಳುವುದಿಲ್ಲ ಎಂದು ನಗುತ್ತಲೇ ಉತ್ತರಿಸಿದರು.

ನಾಳೆ ಮೈಸೂರು ಜಿಲ್ಲೆಯ ಅಧಿಕಾರಿಗಳ ಸಭೆ ಕರೆದಿದ್ದು, ಕೋವಿಡ್ 3 ನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆ ಪ್ರವಾಸಿ ತಾಣಗಳನ್ನು ಮುಚ್ಚಬೇಕು ಅಥವಾ ತೆರೆಯಬೇಕು ಎಂದು ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗುವುದು. ಕಳೆದ 1 ವರ್ಷದಿಂದ ಲಾಕ್​ಡೌನ್​ನಿಂದಾಗಿ ವ್ಯಾಪಾರಸ್ಥರಿಗೆ ತೊಂದರೆಯಾಗಿದ್ದು, ಈ ಹಿನ್ನೆಲೆ ಎಲ್ಲವನ್ನು‌ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ABOUT THE AUTHOR

...view details