ಕರ್ನಾಟಕ

karnataka

By

Published : May 13, 2020, 12:37 PM IST

ETV Bharat / state

ಸಚಿವರ ಮನವಿಗೆ ಡಾ.ಸುಧಾಮೂರ್ತಿ ಸ್ಪಂದನೆ: ಮೃಗಾಲಯಕ್ಕೆ 20 ಲಕ್ಷ ರೂ ದೇಣಿಗೆ

ಲಾಕ್‌ಡೌನ್ ಹಿನ್ನೆಲೆಯಲ್ಲಿ ಮೃಗಾಲಯದಲ್ಲಿ ಪ್ರಾಣಿ ಪಕ್ಷಿಗಳ ನಿರ್ವಹಣೆ ಕಷ್ಟವಾಗಿರುವ ಹಿನ್ನೆಲೆಯಲ್ಲಿ ಡಾ.ಸುಧಾಮೂರ್ತಿ, ಸಚಿವರ ಮನವಿಗೆ ಸ್ಪಂದಿಸಿದ್ದಾರೆ.

sudhamurthy
sudhamurthy

ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಮೃಗಾಲಯ ನಿರ್ವಹಣೆಗಾಗಿ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರಿಗೆ ಸಹಾಯ ಮಾಡುವಂತೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಸ್ಪಂದಿಸಿದ ಅವರು 20 ಲಕ್ಷ ರೂ ದೇಣಿಗೆ ನೀಡಿದ್ದಾರೆ.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಮೃಗಾಲಯವು ಸಂಕಷ್ಟಕ್ಕೆ ಸಿಲುಕಿದ್ದು, ಪ್ರಾಣಿ ಪಕ್ಷಿಗಳ ನಿರ್ವಹಣೆ ಕಷ್ಟವಾಗಿರುವ ಕಾರಣ ಜಿಲ್ಲಾ ಉಸ್ತುವಾರಿ ಸಚಿವರು, ದಾನಿಗಳು ಮೃಗಾಲಯಕ್ಕೆ ದೇಣಿಗೆ ನೀಡುವಂತೆ ತಿಳಿಸಿದ್ದರು. ಜೊತೆಗೆ ಇಲ್ಲಿನ ಪ್ರಾಣಿ, ಪಕ್ಷಿಗಳನ್ನು ದತ್ತು ಪಡೆದುಕೊಳ್ಳುವಂತೆಯೂ ಮನವಿ ಮಾಡಿದ್ದರು. ಈ ವೇಳೆ ಇನ್ಫೋಸಿಸ್ ಫೌಂಡೇಶನ್‌ಗೂ ಸಹಾಯ ಕೋರಿ ಪತ್ರ ಬರೆದಿದ್ದರು.

ಮೈಸೂರು ಮೃಗಾಲಯ

ABOUT THE AUTHOR

...view details