ಮೈಸೂರು : ನಂಜನಗೂಡಿನ ದೇವಸ್ಥಾನ ಸುತ್ತಮುತ್ತ ಭಿಕ್ಷೆ ಬೇಡಿ ಅಲ್ಲಿಯೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮಲಗುತ್ತಿದ್ದ ಭಿಕ್ಷುಕರು ಹಾಗೂ ನಿರ್ಗತಿಕರಿಗೆ ಕೊನೆಗೂ ನಂಜನಗೂಡು ತಾಲೂಕು ಆಡಳಿತ ಮಂಡಳಿ ಆಶ್ರಯ ನೀಡಿದೆ.
ಕೊರೊನಾ ಎರಡನೇ ಅಲೆ ಹಿನ್ನೆಲೆ ರಾಜ್ಯಾದ್ಯಂತ ಲಾಕ್ಡೌನ್ ಘೋಷಣೆ ಮಾಡಿದ್ದರಿಂದ ಭಿಕ್ಷೆ ಬೇಡಿ ಬದುಕುತ್ತಿದ್ದ ಭಿಕ್ಷುಕರಿಗೆ ಹಾಗೂ ನಿರ್ಗತಿಕರಿಗೆ ಊಟದ ಸಮಸ್ಯೆ ಮತ್ತು ಕೊರೊನಾ ಆತಂಕ ಅರಿತ ತಾಲೂಕು ಆಡಳಿತವು, ತಾಲೂಕಿನ ಪುರಭವನದಲ್ಲಿ 120 ಮಂದಿಗೆ ಆಶ್ರಯ ನೀಡಲು ಮುಂದಾಗಿದೆ.