ಮೈಸೂರು: ಕೋವಿಡ್ ಆಸ್ಪತ್ರೆ ಅವ್ಯವಸ್ಥೆ ವಿರುದ್ಧ ಸೋಂಕಿತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ತಿ.ನರಸೀಪುರ ತಾಲೂಕಿನ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ.
ಜಿಲ್ಲೆಯ ತಿ.ನರಸೀಪುರ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿರುವ ತಾಲೂಕು ಕೋವಿಡ್ ಆಸ್ಪತ್ರೆಯಲ್ಲಿ ನೂರಾರು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಆಸ್ಪತ್ರೆಯಲ್ಲಿ ಸರಿಯಾದ ಶುಚಿತ್ವವಿಲ್ಲ. ಕಸ ವಿಲೇವಾರಿ ಮಾಡುತ್ತಿಲ್ಲ. ಸರಿಯಾದ ಊಟ-ಉಪಹಾರ, ನೀರು ಕೊಡುತ್ತಿಲ್ಲ. ಇದರಿಂದ ನಮಗೆ ಕೊರೊನಾದಿಂದ ಮುಕ್ತಿ ಸಿಗುವುದಿಲ್ಲ ಎಂದು ತಾಲೂಕು ಆಡಳಿತದ ವಿರುದ್ಧ ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಿಯಾದ ವ್ಯವಸ್ಥೆ ಕಲ್ಪಿಸುವಂತೆ ಸ್ಥಳೀಯ ಶಾಸಕರಿಗೆ ಹಾಗೂ ತಹಶೀಲ್ದಾರ್ ನಾಗೇಶ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.