ಮೈಸೂರು:ಹೊಂಚು ಹಾಕಿ ವ್ಯಕ್ತಿಗಳಿಂದ ಹಣ ಸುಲಿಗೆ ಮಡುತ್ತಿದ್ದ ನಾಲ್ವರು ಸುಲಿಗೆಕೋರರನ್ನು ಮೇಟಗಳ್ಳಿ ಪೊಲೀಸರು ಬಂಧಿಸಿದ್ದಾರೆ.
ಹೊಂಚು ಹಾಕಿ ವ್ಯಕ್ತಿಗಳಿಂದ ಹಣ ಸುಲಿಗೆ: ನಾಲ್ವರು ಸುಲಿಗೆಕೋರರ ಬಂಧಿಸಿದ ಪೊಲೀಸ್ - ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ
ಹೊಂಚು ಹಾಕಿ ವ್ಯಕ್ತಿಗಳಿಂದ ಹಣ ಸುಲಿಗೆ ಮಡುತ್ತಿದ್ದ ನಾಲ್ವರು ಸುಲಿಗೆಕೋರರನ್ನು ಮೇಟಗಳ್ಳಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
![ಹೊಂಚು ಹಾಕಿ ವ್ಯಕ್ತಿಗಳಿಂದ ಹಣ ಸುಲಿಗೆ: ನಾಲ್ವರು ಸುಲಿಗೆಕೋರರ ಬಂಧಿಸಿದ ಪೊಲೀಸ್ ನಾಲ್ವರು ಸುಲಿಗೆಕೋರರನ್ನು ಬಂಧಿಸಿದ ಪೊಲೀಸ್](https://etvbharatimages.akamaized.net/etvbharat/prod-images/768-512-10973647-thumbnail-3x2-bngjpg.jpg)
ವಿಷ್ಣು, ಗಿರೀಶ್,ಅಜಿತ್ ಕುಮಾರ್ ಮತ್ತು ಯಶವಂತ್ ಬಂಧಿತ ಆರೋಪಿಗಳು. ಇವರು ಮಾರ್ಚ್. ಮಾ.04 ರಂದು ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೈಗಾರಿಕಾ ಪ್ರದೇಶದಲ್ಲಿ ವ್ಯಕ್ತಿಯನ್ನು ಅಡ್ಡಗಟ್ಟಿ ಆತನಿಂದ 28 ಸಾವಿರ ಹಣ, 25 ಗ್ರಾಂ ಚಿನ್ನ, ಒಂದು ಮೊಬೈಲ್ ಫೋನ್ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ವ್ಯಕ್ತಿ ಮೇಟಗಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಸಾಧನಹಳ್ಳಿ ತೋಟದಲ್ಲಿದ್ದ ಮನೆ ಮೇಲೆ ದಾಳಿ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ, ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರು. ಬಂಧಿತರಿಂದ 2 ಬೈಕ್ಗಳನ್ನು ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.