ಕರ್ನಾಟಕ

karnataka

By

Published : Jan 19, 2020, 3:11 PM IST

ETV Bharat / state

ಬಿಜೆಪಿಯಲ್ಲಿಯೂ ಭಿನ್ನಾಭಿಪ್ರಾಯಗಳಿವೆ : ಮಾಜಿ ಶಾಸಕ ಹೆಚ್.ವಿಶ್ವನಾಥ್

ರಾಷ್ಟ್ರೀಯ ಪಕ್ಷ ಬಿಜೆಪಿಯಲ್ಲಿಯೂ ಭಿನ್ನಾಭಿಪ್ರಾಯಗಳಿವೆ, ಇದರಿಂದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದೆ ಎಂದು ಮಾಜಿ ಶಾಸಕ ಹೆಚ್.ವಿಶ್ವನಾಥ್ ಅಸಮಾಧಾನ ಹೊರಹಾಕಿದರು.

There is also grouping in the BJP: H.Vishwanath
ಬಿಜೆಪಿಯಲ್ಲಿಯೂ ಭಿನ್ನಾಭಿಪ್ರಾಯಗಳಿವೆ : ಮಾಜಿ ಶಾಸಕ ಹೆಚ್.ವಿಶ್ವನಾಥ್

ಮೈಸೂರು:ರಾಷ್ಟ್ರೀಯ ಪಕ್ಷ ಬಿಜೆಪಿಯಲ್ಲಿಯೂ ಭಿನ್ನಾಭಿಪ್ರಾಯಗಳಿವೆ, ಇದರಿಂದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದೆ ಎಂದು ಮಾಜಿ ಶಾಸಕ ಹೆಚ್.ವಿಶ್ವನಾಥ್ ಅಸಮಾಧಾನ ಹೊರಹಾಕಿದರು.

ಬಿಜೆಪಿಯಲ್ಲಿಯೂ ಭಿನ್ನಾಭಿಪ್ರಾಯಗಳಿವೆ : ಮಾಜಿ ಶಾಸಕ ಹೆಚ್.ವಿಶ್ವನಾಥ್

ದೊಡ್ಡಕೊಪ್ಪಲು ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ‌ ಸರ್ಕಾರ ರಚನೆಗಾಗಿ ಸಹಾಯ ಮಾಡಿದ 17 ಜನರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಉಪಚುನಾವಣೆಯಲ್ಲಿ ಗೆದ್ದಿರುವ ಹಾಗೂ ಸೋತಿರುವ ಬಿಜೆಪಿಯ 17 ಮಂದಿಗೆ ಸಚಿವ ಸ್ಥಾನ ಕೊಡುತ್ತಾರೆ ಎಂಬ ನಂಬಿಕೆ ಹೈಕಮಾಂಡ್ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೇಲಿದೆ. ಒಂದು ವೇಳೆ ಅದು ಬದಲಾದರೆ ಮುಂದೆ ಕಾದು ನೋಡುತ್ತೀವಿ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ABOUT THE AUTHOR

...view details