ಕರ್ನಾಟಕ

karnataka

ETV Bharat / state

ಸಿದ್ದರಾಮಯ್ಯಗೆ ಕೈ ಶಾಸಕರು, ಸಚಿವರ ಹೇಳಿಕೆಗಳಿಂದ ಬೇಸರ? - undefined

ಕಾಂಗ್ರೆಸ್ ಶಾಸಕರ ಹೇಳಿಕೆಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ಬೇಸರಗೊಂಡಿದ್ದಾರೆ. ಇಂದು ಮೈಸೂರು ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳುವ ಸಂದರ್ಭದಲ್ಲಿ ಮಾಧ್ಯಮದವರು ಮಾತನಾಡಿಸಲು ಯತ್ನಿಸಿದಾಗ, ಮಾತನಾಡಲು ಏನು ಇಲ್ಲ ಎನ್ನುತ್ತ ಹೊರಟು ಹೋದರು.

ಸಿದ್ದರಾಮಯ್ಯ, ಮಾಜಿ ಸಿಎಂ

By

Published : May 8, 2019, 2:18 PM IST

ಮೈಸೂರು:ಕಳೆದ 3 ದಿನಗಳಿಂದ ಕಾಂಗ್ರೆಸ್​ನ ಕೆಲ ಶಾಸಕರು ಮತ್ತು ಸಚಿವರು ನೀಡುತ್ತಿರುವ ಹೇಳಿಕೆಗಳಿಂದ ಬೇಸಗೊಂಡಿದ್ದಾರೆ ಎನ್ನಲಾಗ್ತಿರುವ ಸಿದ್ದರಾಮಯ್ಯ ಮಾಧ್ಯಮಗಳಿಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಮೂರು ದಿನಗಳಿಂದ ಮೈಸೂರು ಭಾಗದಲ್ಲೇ ಇರುವ ಸಿದ್ದರಾಮಯ್ಯ, 2 ದಿನ ಮಡಿಕೇರಿಯ ರೆಸಾರ್ಟ್​ನಲ್ಲಿ ಪುತ್ರನೊಂದಿಗೆ ವಿಶ್ರಾಂತಿಯಲ್ಲಿದ್ದರು. ನಿನ್ನೆ ರಾತ್ರಿ ಟಿ.‌ಕಾಟೂರಿನ ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದು ಇಂದು ಮೈಸೂರು ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳಿದರು. ಈ ಸಂದರ್ಭದಲ್ಲಿ ಮಾಧ್ಯಮದವರು ಅವರನ್ನು ಮಾತನಾಡಿಸಲು ಯತ್ನಿಸಿದರು. ಆಗ ಮಾತನಾಡಲು ಏನು ಇಲ್ಲ ಎನ್ನುತ್ತ ಅವರು ಏರ್​ಪೋರ್ಟ್​ ಒಳಗೆ ಪ್ರವೇಶಿಸಿದರು.

ಸಿದ್ದರಾಮಯ್ಯ, ಮಾಜಿ ಸಿಎಂ

ಕಾಂಗ್ರೆಸ್​​ನ ಚಿಕ್ಕಬಳ್ಳಾಪುರ ಶಾಸಕ ಕೆ ಸುಧಾಕರ್, ಗೃಹ ಸಚಿವರು ಎಂ ಬಿ ಪಾಟೀಲ್​ ಅವರು ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗಬೇಕೆನ್ನುವ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಆದ್ರೆ ಡಿಸಿಎಂ ಪರಮೇಶ್ವರ್​, ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಅವರು ಹೆಚ್​ ಡಿ ಕುಮಾರಸ್ವಾಮಿಯೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಹೇಳುತ್ತಿದ್ದಾರೆ.

ಇವೆಲ್ಲ ವ್ಯತಿರಿಕ್ತ ಹೇಳಿಕೆಗಳಿಂದ ಸಿದ್ದರಾಮಯ್ಯ ಬೇಸರಗೊಂಡಿದ್ದಾರೆ ಎನ್ನಲಾಗ್ತಿದೆ. ನಿನ್ನೆ ಸಹ ಮಡಿಕೇರಿಯಲ್ಲಿ ಅವರು ಮಾಧ್ಯಮದವರ ಜೊತೆ ಮಾತನಾಡಲು ನಿರಾಕರಿಸಿದ್ದರು. ಸಿದ್ದರಾಮಯ್ಯರ ಈ ಮೌನ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

For All Latest Updates

TAGGED:

ABOUT THE AUTHOR

...view details