ಕರ್ನಾಟಕ

karnataka

ಎಸ್.ಎ.ರಾಮದಾಸ್ ಕೈತಪ್ಪಿದ ಟಿಕೆಟ್: ನಾಳೆ ಮುಂದಿನ ತೀರ್ಮಾನ

By

Published : Apr 17, 2023, 10:56 PM IST

ಬಿಜೆಪಿ ಮುಖಂಡರನ್ನು ಭೇಟಿ ಮಾಡಲು ರಾಮದಾಸ್ ನಿರಾಕರಿಸಿದ್ದಾರೆ.

MLA S A. Ramdas and Shri Vatsa
ಶಾಸಕ ಎಸ್ ಎ.ರಾಮದಾಸ್ ಮತ್ತು ಶ್ರೀ ವತ್ಸ

ಮೈಸೂರು : ಇಂದು ಬಿಜೆಪಿಯ ಮೂರನೇ ಪಟ್ಟಿ ಪ್ರಕಟವಾಗಿದ್ದು ಮೈಸೂರಿನ ಕೆ.ಆರ್.ಕ್ಷೇತ್ರದ ಹಾಲಿ ಶಾಸಕ ಎಸ್.ಎ.ರಾಮದಾಸ್​ಗೆ ಟಿಕೆಟ್ ಕೈತಪ್ಪಿದ್ದು, ಹಾಲಿ ಮೈಸೂರು ನಗರ ಬಿಜೆಪಿ ಅಧ್ಯಕ್ಷ ಶ್ರೀವತ್ಸ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಎಸ್.ಎ.ರಾಮದಾಸ್​ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಿದ್ದು ಸಂತೋಷ ತಂದಿದೆ ಎಂದರು.

ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮೈಸೂರು ನಗರದ ಕೆ.ಆರ್.ಕ್ಷೇತ್ರಕ್ಕೆ ಬಿ.ಎಲ್.ಸಂತೋಷ್ ಆಪ್ತ ಶ್ರೀವತ್ಸ ಅವರಿಗೆ ಟಿಕೆಟ್​ ಘೋಷಣೆ ಆಗುತ್ತಿದ್ದಂತೆ ಮೈಸೂರು ನಗರ ಬಿಜೆಪಿ ಕಛೇರಿಯಲ್ಲಿ ಸಿಹಿ ಸಂಭ್ರಮಾಚರಣೆ ಮಾಡಲಾಯಿತು. ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ವತ್ಸ, ಸಾಮಾನ್ಯ ಕಾರ್ಯಕರ್ತನಿಗೆ ನೀಡಿದ್ದು ಸಂತೋಷವಾಗಿದೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಬಿಜೆಪಿಯನ್ನು ಗೆಲ್ಲಿಸುತ್ತೇವೆ. ನನ್ನನ್ನು ಗುರುತಿಸಿದ್ದಕ್ಕೆ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ನಾಳೆ ಸಂಜೆ ರಾಮದಾಸ್ ಮುಂದಿನ ತೀರ್ಮಾನ :ಕಳೆದ 30 ವರ್ಷಗಳಿಂದಲೂ ಬಿಜೆಪಿಯಲ್ಲಿದ್ದ ರಾಮದಾಸ್ ಅವರಿಗೆ ಈ ಬಾರಿ ಟಿಕೆಟ್ ನಿರಾಕರಿಸಲಾಗಿದೆ. ಇದರಿಂದ ಬೇಸರಗೊಂಡಿರುವ ಅವರು ತಮ್ಮ ವಿದ್ಯಾರಣ್ಯಪುರಂ ಮನೆಯಲ್ಲಿದ್ದು, ಸಂಸದ ಪ್ರತಾಪ್ ಸಿಂಹ, ಶ್ರೀ ವತ್ಸ ಸೇರಿದಂತೆ ಇತರ ಬಿಜೆಪಿ ಮುಖಂಡರನ್ನು ಭೇಟಿ ಮಾಡಲು ನಿರಾಕರಿಸಿದರು. ನಾಳೆ ಸಂಜೆ ತಮ್ಮ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಮಾಡಿ ಮುಂದಿನ ತೀರ್ಮಾನ ಮಾಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ :ಬಿಜೆಪಿಯ 3ನೇ ಪಟ್ಟಿಯಲ್ಲಿ ಇಬ್ಬರು ಮಹಿಳೆರಿಗೆ ಮಣೆ; 222 ಕ್ಷೇತ್ರಗಳಲ್ಲಿ ಸ್ತ್ರೀಯರಿಗೆ 12 ಟಿಕೆಟ್

ABOUT THE AUTHOR

...view details