ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ತಂಬಾಕು ಹರಾಜು ಮಾರುಕಟ್ಟೆಯ ರೈತ ಸಭಾಂಗಣದಲ್ಲಿ ತಂಬಾಕು ಬೆಳೆಗಾರರು ಮತ್ತು ಖರೀದಿದಾರರ ಸಂವಾದ ಸಭೆ ಆಯೋಜಿಸಲಾಗಿತ್ತು.
ಪಿರಿಯಾಪಟ್ಟಣ: ತಂಬಾಕು ಬೆಳೆಗಾರರು, ಖರೀದಿದಾರರ ಸಂವಾದ ಸಭೆ - ಶಾಸಕ ಕೆ.ಮಹದೇವ್
ತಂಬಾಕು ಬೆಳೆಗಾರರಿಗೆ ಸರಿಯಾದ ದರ ಸಿಗದೆ ನಷ್ಟ ಅನುಭವಿಸುತ್ತಿದ್ದು, ಹೆಚ್ಚಿನ ದರ ನೀಡಿ ಖರೀದಿ ಮಾಡಿ ಎಂದು ತಂಬಾಕು ಬೆಳೆಗಾರರು ಮತ್ತು ಖರೀದಿದಾರರ ಸಂವಾದ ಸಭೆಯಲ್ಲಿ ಶಾಸಕ ಕೆ.ಮಹದೇವ್ ಐಟಿಸಿ ಹಾಗೂ ಇತರೆ ಕಂಪನಿಯವರಿಗೆ ಒತ್ತಾಯಿಸಿದರು.

ಪಿರಿಯಾಪಟ್ಟಣ ರೈತ ಸಭಾಂಗಣದಲ್ಲಿ ತಂಬಾಕು ಬೆಳೆಗಾರರು, ಖರೀದಿದಾರರ ಸಂವಾದ ಸಭೆ
ಪಿರಿಯಾಪಟ್ಟಣ ರೈತ ಸಭಾಂಗಣದಲ್ಲಿ ತಂಬಾಕು ಬೆಳೆಗಾರರು, ಖರೀದಿದಾರರ ಸಂವಾದ ಸಭೆ
ತಂಬಾಕು ಬೆಳೆಗಾರರ ಸಮಸ್ಯೆಯನ್ನು ವಿಧಾನಸಭೆಯಲ್ಲಿ ಚರ್ಚಿಸುತ್ತೇನೆ. ಸರ್ಕಾರದ ಆರ್ಥಿಕ ಪರಿಸ್ಥಿತಿಯನ್ನು ನೋಡಿಕೊಂಡು ನಾವು ನಿರ್ಧಾರ ತೆಗೆದುಕೊಳ್ಳಬೇಕು. ನಾನು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿ, ನೇರವಾಗಿ ಸರ್ಕಾರವೇ ತಂಬಾಕನ್ನು ಖರೀದಿ ಮಾಡಬೇಕು ಹಾಗೂ ಬೆಂಬಲ ಬೆಲೆ ನೀಡಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದರು.