ಕರ್ನಾಟಕ

karnataka

By

Published : Apr 30, 2020, 9:10 PM IST

ETV Bharat / state

ಮೈಸೂರಿನಲ್ಲಿ ಇಂದು ಹೊಸ ಕೊರೊನಾ ಕೇಸ್​​ ಇಲ್ಲ: 7 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್!

ಮೈಸೂರಿನಲ್ಲಿ ಇಂದು ಒಂದೇ ದಿನ 7 ಜನರು ಕೋವಿಡ್ ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇಲ್ಲಿಯವರೆಗೆ ಸೋಂಕಿತರ ಸಂಖ್ಯೆ 90. ಆ ಪೈಕಿ 65 ಜನ ಸೋಂಕಿತರು ಗುಣಮುಖರಾಗಿದ್ದು, ಉಳಿದ 25 ಜನ ಮಾತ್ರ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

D C   Abhiram G. Shankar
ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್

ಮೈಸೂರು: ಜಿಲ್ಲೆಯಲ್ಲಿ ಇಂದು ಒಂದೂ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿಲ್ಲ. ಬದಲಾಗಿ ಒಂದೇ ದಿನ 7 ಜನ ಕೋವಿಡ್ ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ .

ಒಂದು ವಾರದಿಂದ ಮೈಸೂರಿನಲ್ಲಿ 2 ಕೊರೊನಾ ಪ್ರಕರಣಗ ಪತ್ತೆಯಾಗಿದ್ದು, ಇಲ್ಲಿಯವರೆಗೆ ಸೋಂಕಿತರ ಸಂಖ್ಯೆ 90. ಆದರೆ ಇಂದು ಬೆಳಿಗ್ಗೆ 4 ಜನ ಹಾಗೂ ಮಧ್ಯಾಹ್ನ 3 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇಲ್ಲಿಯವರೆಗೆ 65 ಜನ ಸೋಂಕಿತರು ಗುಣಮುಖರಾಗಿದ್ದು, ಉಳಿದ 25 ಜನ ಮಾತ್ರ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details